ಕರಾವಳಿ

ದೋಣಿಯಲ್ಲಿ ಬೂತ್ ಅಧ್ಯಕ್ಷರ ಮನೆಗೆ ತೆರಳಿ ನಾಮಫಲಕ ಜೋಡಿಸಿದ ಬೈಂದೂರು ಶಾಸಕ ಸುಕುಮಾರ ಶೆಟ್ಟಿ

Pinterest LinkedIn Tumblr

(ವರದಿ- ಯೋಗೀಶ್ ಕುಂಭಾಸಿ)

ಕುಂದಾಪುರ: ದೋಣಿ ಮೂಲಕ ನದಿ ದಾಟಿದ ಬೈಂದೂರು ಶಾಸಕ ಬಿ.ಎಂ ಸುಕುಮಾರ್ ಶೆಟ್ಟಿ ಪಕ್ಷದ ಬೂತ್ ಅಧ್ಯಕ್ಷರ ಮನೆಗೆ ತೆರಳಿ ನಾಮಫಲಕ ಜೋಡಿಸಿದ್ದಾರೆ.

ಬಿಜೆಪಿ ಪಕ್ಷದ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರ ಸೂಚನೆಯಂತೆ ಕ್ಷೇತ್ರದ ಎಲ್ಲಾ ಬೂತ್ ಅಧ್ಯಕ್ಷರ ಮನೆಯಲ್ಲಿ ನಾಮಫಲಕದ ಜೋಡಣೆ ಅಭಿಯಾನ ನಡೆಯುತ್ತಿದೆ.

ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಟ್ ಬೆಲ್ತೂರು ಗ್ರಾಮಪಂಚಾಯತ್ ವ್ಯಾಪ್ತಿಯ ತುಳಸಿ ಎಂಬಲ್ಲಿ ಎರಡನೇ ವಾರ್ಡಿನ ಕುದ್ರುವಿನಲ್ಲಿರುವ ಹರೀಶ್ ದೇವಾಡಿಗರ ಮನೆಗೆ ನದಿಯನ್ನು ದಾಟಿ ಹೋಗಿ ನಾಮಫಲಕವನ್ನು ಲಗತ್ತಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಮತ್ತು ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

ಬೂತ್ ಅಧ್ಯಕ್ಷರು ಮತ್ತು ಪ್ರಮುಖರೇ ನಮ್ಮ ಪಕ್ಷದ ಶಕ್ತಿಯಾಗಿದ್ದು ಪಕ್ಷ ಸಂಘಟನೆಗಳಲ್ಲಿ ಅವರ ಶ್ರಮ ಶ್ಲಾಘನೀಯ ಎಂದು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಹೇಳಿದ್ದಾರೆ.

Comments are closed.