ಮಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಸಾಮಾಜಿಕ ಕಾರ್ಯಕರ್ತರೊಬ್ಬರು ಸೇರಿದಂತೆ ಸಾರ್ವಜನಿಕರು ಹಿಡಿದು ಉಳ್ಳಾಲ ಠಾಣಾ ಪೊಲೀಸರ ವಶಕ್ಕೆ ನೀಡಿದ್ದಾರೆ.
(ಸಾಂದರ್ಭಿಕ ಚಿತ್ರ)
ಮೂಲತ: ಬೆಂಗಳೂರು ಕಲಾಸಿಪಾಳ್ಯ ನಿವಾಸಿ ಸದ್ಯ ಕೂಲಿ ಕೆಲಸ ಮಾಡಿಕೊಂಡು ಕಲ್ಕಟ್ಟದ ವಾಸಿ ಆರೀಫ್ ಪಾಷಾ(30) ಬಂಧಿತ ಆರೋಪಿ. ಬಾಲಕಿ ತಂದೆಗೆ ಪರಿಚಿತನಾಗಿರುವ ಆರೋಪಿಯು ತಿನ್ನಲು ತಿಂಡಿ ಕೊಡಿಸುವುದಾಗಿ ನಂಬಿಸಿ ಮನೆಯಿಂದ ಕರೆತಂದು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈತನ ಕೃತ್ಯದಿಂದ ಗಾಬರಿಗೊಂಡ ಬಾಲಕಿ ಓಡಿ ತಪ್ಪಿಸಿಕೊಳ್ಳುವ ಸಂದರ್ಭ ಅದೇ ದಾರಿಯಲ್ಲಿ ಬರುತ್ತಿದ್ದ ಸಾಮಾಜಿಕ ಕಾರ್ಯಕರ್ತ ತಲಪಾಡಿಯ ಯಶು ಪಕಳ ದಂಪತಿ ಬೈಕ್ ನಿಲ್ಲಿಸಿ ಬಾಲಕಿಯನ್ನು ವಿಚಾರಿಸಿದಾಗ ಆಕೆ ನಡೆದ ಕೃತ್ಯವನ್ನು ತಿಳಿಸಿದ್ದಾಳೆ.
ಸ್ಥಳೀಯರ ಸಹಕಾರದಿಂದ ಆರೋಪಿ ಆರೀಫ್ ಪಾಷಾನನ್ನು ಹಿಡಿದಿದ್ದಾರೆ. ಬಳಿಕ ಉಳ್ಳಾಲ ಠಾಣಾ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ. ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
Comments are closed.