ಕರಾವಳಿ

ಈಜಲು ತೆರಳಿ ಹೊಳೆಯಲ್ಲಿ ಮುಳುಗಿದ್ದ ಯುವಕನ‌ ಮೃತದೇಹ 2 ದಿನದ ಬಳಿಕ ಪತ್ತೆ

Pinterest LinkedIn Tumblr

ಕುಂದಾಪುರ: ಮೊವಾಡಿ‌ ಸೇತುವೆ ಬಳಿ‌ ನದಿಯಲ್ಲಿ ಸ್ನೇಹಿತನೊಂದಿಗೆ ಈಜಲು ತೆರಳಿದ್ದ ಸಂದರ್ಭ ನೀರಿನ ಸೆಳೆತಕ್ಕೆ ಸಿಲುಕಿ ನೀರುಪಾಲಾದ ಯುವಕನ ಮೃತದೇಹ ಎರಡು ದಿನಗಳ ಬಳಿಕ ಬಂಟ್ವಾಡಿ ಸೇತುವೆ ಬಳಿಯ ಸೌಪರ್ಣಿಕ ನದಿಯಲ್ಲಿ ಪತ್ತೆಯಾಗಿದೆ.

ಇಲ್ಲಿ‌ನ ತ್ರಾಸಿ ಸಮೀಪದ ಹೋಲಿಕ್ರಾಸ್ ನಿವಾಸಿ ಮಹೇಂದ್ರ (24) ಮೃತ ಯುವಕ.

ಭಾನುವಾರ ಸಂಜೆ ಮೊವಾಡಿಯ ಸೌಪರ್ಣಿಕಾ ನದಿ ತೀರಕ್ಕೆ ಮಹೇಂದ್ರ, ಆಶಿಕ್ ಹಾಗೂ ಶರತ್ ತೆರಳಿದ್ದರು. ಮಹೇಂದ್ರ ಹಾಗೂ ಆಶಿಕ್ ನೀರಿಗೆ ಇಳಿದಿದ್ದು ಮಹೇಂದ್ರ ಕಾಲು ಜಾರಿ ನೀರು ಪಾಲಾಗಿದ್ದ.

ಸತತ ಎರಡೂ ದಿನಗಳಿಂದಲೂ ನೀರುಪಾಲಾದ ಮಹೇಂದ್ರನ ಪತ್ತೆಗೆ ಶೋಧ ಕಾರ್ಯ ನಡೆಸಲಾಗಿತ್ತು. ಅಗ್ನಿ ಶಾಮಕ ದಳದ ಸಿಬ್ಬಂದಿ, ಸ್ಥಳೀಯರು ದೋಣಿ ಮೂಲಕ ಪತ್ತೆಗಾಗಿ ಹುಡುಕಾಟ ನಡೆಸಿದ್ದರು. ಅಲ್ಲದೇ ಮುಳುಗುತಜ್ಞ ಈಶ್ವರ್ ಮಲ್ಪೆ ಹಾಗೂ ಸ್ಥಳೀಯ ಮುಳುಗುತಜ್ಞ ಗಂಗೊಳ್ಳಿಯ ಲೈಟ್ ಹೌಸ್ ನ ದಿನೇಶ್ ಖಾರ್ವಿ, ಗಂಗೊಳ್ಳಿಯ ಸಂದೇಶ್ ಮತ್ತು ಗುರುರಾಜ್ ಶೋಧ ಕಾರ್ಯದಲ್ಲಿ ಸಹಕರಿಸಿದ್ದಾರೆ.

ಗಂಗೊಳ್ಳಿ ಠಾಣಾಧಿಕಾರಿ ನಂಜಾ ನಾಯ್ಕ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Comments are closed.