ಕರ್ನಾಟಕ

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಐಪಿಎಸ್ ಅಧಿಕಾರಿ ಜಗದೀಶ್ ನಿಧನ

Pinterest LinkedIn Tumblr

ಬೆಂಗಳೂರು: ಐಪಿಎಸ್ ಅಧಿಕಾರಿ ಡಾ. ಕೆ.ವಿ. ಜಗದೀಶ್ (44) ಅವರು ಕ್ಯಾನ್ಸರ್‌ನಿಂದಾಗಿ ಬೆಂಗಳೂರಿನ ಎಚ್‌ಸಿಜಿ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾದರು. ಅವರಿಗೆ ಪತ್ನಿ ಹಾಗೂ ಇಬ್ಬರು ಪುತ್ರರು ಇದ್ದಾರೆ.

ಕೋಲಾರ ಮೂಲದವರಾದ ಜಗದೀಶ್ ಅವರು ಎಂಬಿಬಿಎಸ್ ಪದವೀಧರರು. 2006ರಲ್ಲಿ ಕರ್ನಾಟಕ ಪೊಲೀಸ್ ಸೇವೆಗೆ ಸೇರಿದ್ದರು. 2017ರಲ್ಲಿ ಐಪಿಎಸ್ ಶ್ರೇಣಿಗೆ ಅರ್ಹತೆ ಪಡೆದಿದ್ದರು. ಬೆಂಗಳೂರು ಸಂಚಾರ ವಿಭಾಗದ ಡಿಸಿಪಿ ಸೇರಿದಂತೆ ಹಲವು ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದರು.

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಹಲವು ವರ್ಷಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ಅವರ ಆರೋಗ್ಯ ತೀವ್ರ ಹದಗೆಟ್ಟಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಎಚ್‌ಸಿಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಜಗದೀಶ್ ಅವರ ಅಂತ್ಯಕ್ರಿಯೆಯನ್ನು ಹುಟ್ಟೂರಾದ ಕೋಲಾರದಲ್ಲಿ ನಡೆಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.

 

Comments are closed.