ಕುಂದಾಪುರ: ಭಾರತೀಯ ಜನತಾ ಪಾರ್ಟಿ ಸೇವೆ ಮತ್ತು ಸಮರ್ಪಣಾ ಮನೋಭಾವನೆ ಮೈಗೂಡಿಸಿಕೊಂಡಿದೆ. ತ್ಯಾಗ ಮತ್ತು ಸೇವೆಯ ಆದರ್ಶಗಳು ಓರ್ವ ವ್ಯಕ್ತಿಯಲ್ಲಿದ್ದರೆ ಆತ ಜಗತ್ತಿನಲ್ಲಿ ಅಸಾಮಾನ್ಯ ವ್ಯಕ್ತಿಯಾಗುತ್ತಾನೆ. ಬಿಜೆಪಿ ಕಾರ್ಯಕರ್ತ ಚುನಾವಣೆ ಸಂದರ್ಭ ಮಾತ್ರವಲ್ಲದೆ ಎಂದಿಗೂ ಸಮಾಜದ ಮಧ್ಯೆ ಸಕ್ರೀಯವಾಗಿದ್ದು ಸಮರ್ಪಣ ಮನೋಭಾವನೆಯಿಂದ ಕೆಲಸ ಮಾಡುತ್ತಾನೆ. ವಿಶ್ರಾಂತಿರಹಿತವಾಗಿ, ರಜೆಯಿಲ್ಲದೆ ಕೆಲಸ ಮಾಡುವ ಪ್ರಧಾನಿ ಮೋದಿ ನಮಗೆ ಮಾದರಿ ಎಂದು ಬಿಜೆಪಿ ಯುವಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಾಳಿಕಾಯಿ ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರ 71ನೇ ಜನ್ಮದಿನದ ಅಂಗವಾಗಿ ಸೇವೆ ಮತ್ತು ಸಮರ್ಪಣೆ ಕಾರ್ಯಕ್ರಮದಡಿಯಲ್ಲಿ ಬಿಜೆಪಿ ಯುವಮೋರ್ಚಾ, ಕುಂದಾಪುರ ಮಂಡಲದ ವತಿಯಿಂದ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ, ನೇತ್ರ ಜ್ಯೋತಿ ಚಾರಿಟೆಬಲ್ ಟ್ರಸ್ಟ್, ಉಡುಪಿ ಕಾರ್ಲ್ ಹೈಸ್ ಇಂಡಿಯಾ (ಬೆಂಗಳೂರು) ಪ್ರೈ.ಲಿ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಅಂಧತ್ವ ನಿವಾರಣಾ ವಿಭಾಗ ಉಡುಪಿ ಜಿಲ್ಲೆ, ಪ್ರಾಥಮಿಕ ಆರೋಗ್ಯ ಕೇಂದ್ರ ಬಿದ್ಕಲ್ಕಟ್ಟೆ ಯ ಜಂಟಿ ಆಶ್ರಯದಲ್ಲಿ ನೇತ್ರದಾನ, ರಕ್ತದಾನ, ಉಚಿತ ಕಣ್ಣಿನ ಚಿಕಿತ್ಸೆ , ವಾಕ್ ಶ್ರವಣ ಶಿಬಿರ ಮತ್ತು ಕನ್ನಡಕ ವಿತರಣಾ ಕಾರ್ಯಕ್ರಮ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ರಕ್ತ ನಿಧಿ ಕೇಂದ್ರ ಕುಂದಾಪುರದ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರ ಬಿದ್ಕಲ್ಕಟ್ಟೆ ಶ್ರೀ ನಾಗಲಕ್ಷ್ಮೀ ಸಭಾಭವನದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಮಾಜದ ನಡುವೆಯೇ ಇದ್ದು ಸಮಾಜದಲ್ಲಿ ನಡೆಯುವ ಏರಿಳಿತಗಳ ವೇಳೆ ಬೀದಿಗಿಳಿದು ಕೆಲಸ ಮಾಡುವುದು ಬಿಜೆಪಿ ಕಾರ್ಯಕರ್ತನಿಗೆ ತಿಳಿದಿದೆ. ಆತ ಸಮಾಜಕ್ಕಾಗಿ ತುಡಿಯುವ, ದೇಶದ ಸಮಸ್ಯೆಗೆ ಮಿಡಿಯುವ, ಪ್ರಾಣ ತ್ಯಾಗಕ್ಕೂ ಸಿದ್ದವಿರುತ್ತಾನೆ. ನಮ್ಮ ನಾಯಕರಾದ ಮೋದಿಯವರ ಜನುಮ ದಿನದ ಹಿನ್ನೆಲೆ ಸಮರ್ಪಣಾ ಮನೋಭಾವನೆ ಕೆಲಸ ಮಾಡುತ್ತಿರುವ ಭಾಜಪಾ ಹಮ್ಮಿಕೊಂಡ ‘ಸೇವಾ ಮತ್ತು ಸಮರ್ಪಣಾ’ ಅಭಿಯಾನದ ಮೂಲಕ ಸಮಾಜದಲ್ಲಿ ದೊಡ್ಡ ಸೇವೆ ಮಾಡಲು ಭಗವಂತ ನೀಡಿದ ದೊಡ್ಡ ಅವಕಾಶ ಎಂದರು.
ಈ ಸಂದರ್ಭ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಆಗಮಿಸಿದ್ದರು. ನೇತ್ರದಾನ ಮಾಡಲು ಸುಮಾರು 81 ಮಂದಿ,100ಕ್ಕೂ ಅಧಿಕ ಮಂದಿಯಿಂದ ರಕ್ತದಾನ ಹಾಗೂ 360ಕ್ಕೂ ಅಧಿಕ ಮಂದಿ ಉಚಿತ ಕಣ್ಣಿನ ಚಿಕಿತ್ಸೆ , ವಾಕ್ ಶ್ರವಣ ಶಿಬಿರದಲ್ಲಿ ಪಾಲ್ಗೊಂಡಿರುವ ಬಗ್ಗೆ ಹರ್ಷ ವ್ಯಕ್ತಪಡಿಸಿದರು.
ಕುಂದಾಪುರ ಬಿಜೆಪಿ ಯುವಮೋರ್ಚಾದ ಅಧ್ಯಕ್ಷ ಅವಿನಾಶ್ ಉಳ್ತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದು ಪ್ರಸ್ತಾವನೆಗೈದರು.
ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಮಂಡಳಿಯ ಉಪಾಧ್ಯಕ್ಷ ಕಿರಣ್ ಕುಮಾರ್ ಕೊಡ್ಗಿ, ಉಡುಪಿ ಜಿಲ್ಲಾ ಬಿಜೆಪಿ ಯುವಮೋರ್ಚಾದ ಅಧ್ಯಕ್ಷ ವಿಖ್ಯಾತ್ ಶೆಟ್ಟಿ, ರೆಡ್ ಕ್ರಾಸ್ ಕುಂದಾಪುರ ರಕ್ತ ನಿಧಿ ಕೇಂದ್ರದ ಅಧ್ಯಕ್ಷ ಜಯಕರ ಶೆಟ್ಟಿ, ಕುಂದಾಪುರ ಬಿಜೆಪಿ ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ, ಕರ್ನಾಟಕ ಯುವ ಮೋರ್ಚಾದ ರಾಜ್ಯ ಕಾರ್ಯದರ್ಶಿ ಶ್ವೇತಾ ಪೂಜಾರಿ, ಪ್ರಸಾದ ನೇತ್ರಾಲಯದ ಕಣ್ಣಿನ ತಜ್ಞೆ ಡಾ| ಸೀಮಾ, ಕುಂದಾಪುರ ಬಿಜೆಪಿ ಯುವಮೋರ್ಚಾದ ಪ್ರಧಾನ ಕಾರ್ಯದರ್ಶಿ ಚೇತನ್ ಬಂಗೇರ, ಕ್ಷೇತ್ರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುರೇಶ್ ಶೆಟ್ಟಿ ಗೋಪಾಡಿ, ಸತೀಶ್ ಪೂಜಾರಿ ವಕ್ವಾಡಿ, ಕಾಡೂರು ಸುರೇಶ್ ಶೆಟ್ಟಿ, ಹಾಲಾಡಿ ಯುವಮೋರ್ಚಾದ ಅಧ್ಯಕ್ಷ ಸುದೀಪ್ ಶೆಟ್ಟಿ ಬೆಳ್ವೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರತ್ ಶೆಟ್ಟಿ ಉಪ್ಪುಂದ , ಹರ್ಷ ಪೂಜಾರಿ ಅಮಾಸೆಬೈಲು, ಹಾಲಾಡಿ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ಶಂಕರ ಮೊಗವೀರ, ಸಂಪತ್ಕುಮಾರ್ ಶೆಟ್ಟಿ ಶಾನಾಡಿ ಮೊದಲಾದವರು ಉಪಸ್ಥಿತರಿದ್ದರು.
ರೂಪಾ ಪೈ ಪ್ರಾರ್ಥಿಸಿದರು. ಸುದರ್ಶನ್ ಆರ್ಡಿ ಪ್ರತಿಜ್ಞಾ ವಿಧಿ ಬೋಧಿಸಿದರು. ಚೇತನ್ ಬಂಗೇರ ಸ್ವಾಗತಿಸಿ, ಪುರಸಭೆ ನಾಮನಿರ್ದೇಶಿತ ಸದಸ್ಯ ರತ್ನಾಕರ ಕುಂದಾಪುರ ನಿರೂಪಿಸಿ, ಸುನಿಲ್ ಖಾರ್ವಿ ವಂದಿಸಿದರು.
Comments are closed.