ಮಂಗಳೂರು: ಬೈಕಂಪಾಡಿಯ ಮೊಬೈಲ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕನೋರ್ವ ಮೊಬೈಲ್ ಖರೀದಿಸಲು ಬಂದ ಯುವತಿಯ ಪರಿಚಯ ಬೆಳೆಸಿಕೊಂಡು ನಂಬಿಸಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಿನ್ನಿಗೋಳಿಯ ಮುನ್ನ ಯಾನೆ ಇಬ್ರಾಹಿಂ ಬಂಧಿತ ಆರೋಪಿಯಾಗಿದ್ದಾನೆ. ಬೈಕಂಪಾಡಿಯ ಮೊಬೈಲ್ ಅಂಗಡಿಗೆ ಮೊಬೈಲ್ ಖರೀದಿಸಲು ಯುವತಿ ಹೋಗಿದ್ದು, ಈ ಸಂದರ್ಭ ಯುವತಿಯ ಪರಿಚಯ ಬೆಳೆಸಿಕೊಂಡಿದ್ದ.
ತನ್ನ ನಿಜವಾದ ಹೆಸರನ್ನು ಮರೆ ಮಾಚಿ ಹಿಂದೂ ಎಂದು ತಿಳಿಸಿ ಪ್ರೀತಿಯ ನಾಟಕವಾಡಿ ಕಳೆದ ಆಗಸ್ಟ್ನಲ್ಲಿ ಲಾಡ್ಜ್ ಒಂದಕ್ಕೆ ಕರೆದೊಯ್ದು ಅತ್ಯಾಚಾರ ಮಾಡಿ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾಳೆ. ಐಪಿಸಿ ಕಲಂ 376, 354, 506ರಂತೆ ಪ್ರಕರಣ ದಾಖಲಾಗಿದೆ.
Comments are closed.