ಕರಾವಳಿ

ಅಕ್ರಮ ಮರಳುಗಾರಿಕೆ ಅಡ್ಡೆಗೆ ಪೊಲೀಸರಿಂದ ದಾಳಿ: 11 ದೋಣಿಗಳು ವಶಕ್ಕೆ..!

Pinterest LinkedIn Tumblr

ಮಂಗಳೂರು: ನಗರದ ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಫೈಸಲ್ ನಗರ ಬಳಿಯ ನದಿ ತೀರದಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಗೆ ದಾಳಿ ನಡೆಸಿದ ಪೊಲೀಸರು 11 ದೋಣಿಗಳನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

ಫೈಸಲ್ ನಗರದ ಬಳಿಯ ನದಿಯಲ್ಲಿ ರಾತ್ರಿ ಹೊತ್ತು ಅಕ್ರಮವಾಗಿ ದೋಣಿಗಳಲ್ಲಿ ಮರಳುಗಾರಿಕೆ ನಡೆಸಲಾಗುತ್ತಿದೆ ಎಂಬ ದೂರಿನ ಮೇರೆಗೆ ಈ ದಾಳಿ ನಡೆಸಲಾಗಿದೆ ಎನ್ನಲಾಗಿದೆ.

ಅಕ್ರಮವಾಗಿ ಮರಳುಗಾರಿಕೆಯಲ್ಲಿ ತೊಡಗಿದ್ದ 11 ದೋಣಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಗಣಿ ಇಲಾಖೆಯ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗುವುದು ಎಂದು ಡಿಸಿಪಿ ಹರಿರಾಂ ಶಂಕರ್ ತಿಳಿಸಿದ್ದಾರೆ.

Comments are closed.