ಕರ್ನಾಟಕ

ಮಂಡ್ಯದಲ್ಲಿ ಮತ್ತೋರ್ವ ಅಪ್ಪು ಅಭಿಮಾನಿ ಸಾವು: 7ಕ್ಕೇರಿದ ಮೃತರ ಸಂಖ್ಯೆ

Pinterest LinkedIn Tumblr

ಮಂಡ್ಯ:  ಪುನೀತ್ ರಾಜಕುಮಾರ್ ಅವರ ನಿಧನದಿಂದ ಉಂಟಾದ ಆಘಾತಕ್ಕೆ ಮತ್ತೋರ್ವ ಅಭಿಮಾನಿ ಸಾವನ್ನಪ್ಪಿದ್ದಾರೆ.  ಇದರಿಂದ ಪವರ್ ಸ್ಟಾರ್ ಪುನೀತ್ ನಿಧನದ ನೋವು ತಡೆಯಲಾಗದೆ ಸಾವಿಗೀಡಾದವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.

ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದ ಕೆ.ಎಂ.ರಾಜೇಶ್ (50) ಮೃತಪಟ್ಟ ಅಭಿಮಾನಿಯಾಗಿದ್ದಾರೆ. ಇವರು ಪುನೀತ್ ನಿಧನದ ಬಳಿಕ ಸರಿಯಾಗಿ ಊಟ ಸೇವಿಸದೇ ಅಸ್ವಸ್ಥರಾಗಿದ್ದರು.

ನಿನ್ನೆ ಅಂತಿಮ ದರ್ಶನಕ್ಕೆ ಹೋಗುವುದಾಗಿ ಮನೆ ಬಿಟ್ಟಿದ್ದ ರಾಜೇಶ್ ಮಂಡ್ಯದ ಸಿಲ್ವರ್ ಜ್ಯೂಬಿಲಿ ಪಾರ್ಕ್ ಬಳಿ ಸುಸ್ತಾಗಿ ಬಿದ್ದಿದ್ದರು.  ಸಂಜೆ ಪರಿಚಯಸ್ಥರು ನೋಡಿ ಮನೆಗೆ ಕರೆದುಕೊಂಡು ಹೋಗಿ ವೈದ್ಯರಿಂದ ಚಿಕಿತ್ಸೆಯನ್ನೂ ಕೊಡಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಧ್ಯ ರಾತ್ರಿ 12 ಗಂಟೆಯಲ್ಲಿ ಮೃತಪಟ್ಟಿದ್ದಾರೆ.

ಡಾ.ರಾಜ್ ಕುಟುಂಬದ ಅಪ್ಪಟ ಅಭಿಮಾನಿಯಾಗಿದ್ದ ರಾಜೇಶ್ ಡಾ. ರಾಜ್ ಕುಮಾರ್ ಎಂದು ಹೆಸರಿಟ್ಟು ಹೋಟೆಲ್ ನಡೆಸುತ್ತಿದ್ದರು. ಆದರೆ ಪುನೀತ್ ನಿಧನದಿಂದ ಆಘಾತಕ್ಕೆ ಒಳಗಾಗಿ ತೀವ್ರ ಅಸ್ವಸ್ಥರಾಗಿದ್ದರು.

 

Comments are closed.