ಬೆಂಗಳೂರು: ಕಳೆದ ಶುಕ್ರವಾರ ಹೃದಯಾಘಾತದಿಂದ ಮೃತಪಟ್ಟ ಕನ್ನಡ ಚಿತ್ರರಂಗದ ನಟ ಪುನೀತ್ ರಾಜ್ ಕುಮಾರ್ ಸಮಾಧಿಯ ದರ್ಶನಕ್ಕೆ ಇಂದು (ಬುಧವಾರ) ಅಭಿಮಾನಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕಂಠೀರವ ಸ್ಟುಡಿಯೋದಲ್ಲಿ ಸರ್ಕಾರದ ವತಿಯಿಂದ ಅಗತ್ಯ ಕ್ರಮ ಕೈಗೊಳ್ಳಲಾಗಿದೆ.
ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ಅಪ್ಪು ಸಮಾಧಿ ದರ್ಶನ ಪಡೆಯಲು ಅನುವು ಮಾಡಿಕೊಡಲಾಗಿದೆ. ಐದನೇ ದಿನವಾದ ನಿನ್ನೆ ರಾಜ್ ಕುಟುಂಬದಿಂದ ಪುನೀತ್ ರಾಜ್ ಕುಮಾರ್ ಸಮಾಧಿಗೆ ಹಾಲುತುಪ್ಪ ಬಿಡುವ ಕಾರ್ಯವನ್ನು ಹಮ್ಮಿಕೊಳ್ಳಲಾಗಿತ್ತು.
ನೆಚ್ಚಿನ ನಟನ ಸಮಾಧಿಯನ್ನು ನೋಡಲು ರಾಜ್ಯ ನಾನಾ ಭಾಗಗಳಿಂದ ಅಭಿಮಾನಿಗಳು ಬೆಂಗಳೂರಿನ ಕಂಠೀರವ ಸ್ಟುಡಿಯೋ ಕಡೆ ಆಗಮಿಸುತ್ತಿದ್ದಾರೆ. ಅಭಿಮಾನಿಗಳಿಂದ ನೂಕುನುಗ್ಗಲು ಆಗಬಾರದೆಂದು ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ.
Comments are closed.