ಕರ್ನಾಟಕ

ಪುನೀತ್ ಪುಣ್ಯಸ್ಮರಣೆ; ‘ದೊಡ್ಮನೆ’ಯ ಅನ್ನಸಂತರ್ಪಣೆಗೆ ಆಗಮಿಸಿದ ಸಹಸ್ರಾರು ‘ಅಪ್ಪು’ ಅಭಿಮಾನಿಗಳು

Pinterest LinkedIn Tumblr

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಗಲಿ 12 ದಿನವಾಗಿದ್ದು ಅವರ ಸ್ಮರಣಾರ್ಥ ಅಭಿಮಾನಿಗಳಿಗೆ ಅನ್ನ ಸಂತರ್ಪಣೆ ನಡೆದಿದೆ. ಸಹಸ್ರಾರು ಮಂದಿ ಈ ಅನ್ನಸಂತರ್ಪಣೆಯಲ್ಲಿ ಭಾಗವಹಿಸಿದರು.

ಪುನೀತ್ ನೆನಪಿನಲ್ಲಿ ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಭಿಮಾನಿಗಳಿಗೆ ಅನ್ನಸಂತರ್ಪಣಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ಅಪ್ಪು ಪತ್ನಿ ಅಶ್ವಿನಿ ಪುನೀತ್ ರಾಜ್‍ಕುಮಾರ್, ಸಹೋದರ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್‍ಕುಮಾರ್, ಅವರ ಪತ್ನಿ ಮಗಳ ಅಭಿಮಾನಿಗಳಿಗೆ ಊಟ ಬಡಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಇದೇ ವೇಳೆ ಅಭಿಮಾನಿಗಳಿಗೆ ಊಟ ಬಡಿಸುತ್ತಿದ್ದ ಅಶ್ವಿನಿ ಪತಿ ಪುನೀತ್ ರಾಜ್‍ಕುಮಾರ್ ಅವರನ್ನು ನೆನೆದು ಕಂಬನಿ ಮಿಡಿದರು.

ಅಪ್ಪು ಅಭಿಮಾನಿಗಳಿಗೆ ಅನ್ನ ಸಂತರ್ಪಣೆ ಕಾರ್ಯಕ್ರಮಕ್ಕೆ ವೆಜ್ ಜೊತೆಗೆ ನಾನ್ ವೆಜ್ ಊಟದ ವ್ಯವಸ್ಥೆ ಮಾಡಲಾಗಿತ್ತು. ನಿರೀಕ್ಷೆಯಂತೆ ಕಾರ್ಯಕ್ರಮಕ್ಕೆ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸಿದ್ದಾರೆ. 2.30 ಗಂಟೆಗೆ ಬಂದ ವರದಿ ಪ್ರಕಾರ ಸುಮಾರು 25 ಸಾವಿರ ಮಂದಿ‌ ಆಗಮಿಸಿದ್ದಾರೆ ಎನ್ನಲಾಗಿದೆ.

Comments are closed.