ಕರಾವಳಿ

ನಾಳೆ ಕರಾವಳಿ ಜಿಲ್ಲೆಯಾದ್ಯಂತ ವಿಕ್ರಾಂತ್ ತುಳು ಸಿನಿಮಾ ತೆರೆಗೆ

Pinterest LinkedIn Tumblr

ಮಂಗಳೂರು : ರಾಧಾ ನಿಸರ್ಗ ಕಂಬೈನ್ಸ್ ಲಾಂಛನದಲ್ಲಿ ತಯಾರಾದ ನವೀನ್ ಮಾರ್ಲ ಕೊಡಂಗೆ ನಿರ್ದೇಶನದ ರಾಜೇಂದ್ರ ಯಶು ಬೆದ್ರೋಡಿ ನಿರ್ಮಾಣದ ವಿಕ್ರಾಂತ್ ತುಳು ಸಿನಿಮಾ ನವೆಂಬರ್ 12 ರಂದು ಶುಕ್ರವಾರ ಕರಾವಳಿ ಜಿಲ್ಲೆ ಯಾದ್ಯಂತ ತೆರೆ ಕಾಣಲಿದೆ ಎಂದು ಸಿನಿಮಾದ ನಿರ್ದೇಶಕ ನವೀನ್ ಮಾರ್ಲ ಕೊಡಂಗೆ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳೂರಿನಲ್ಲಿ ರೂಪವಾಣಿ, ಬಿಗ್ ಸಿನಿಮಾಸ್, ಪಿ.ವಿ.ಆರ್, ಸಿನಿ ಪೊಲೀಸ್, ಉಡುಪಿಯಲ್ಲಿ ಕಲ್ಪನಾ, ಕಾರ್ಕಳದಲ್ಲಿ ರಾಧಿಕಾ, ಮಣಿಪಾಲದಲ್ಲಿ ಭಾರತ್ ಮಾಲ್, ಬೆಳ್ತಂಗಡಿಯಲ್ಲಿ ಭಾರತ್ ಸಿನಿಮಾ ಮಂದಿರದಲ್ಲಿ ಸಿನಿಮಾ ಬಿಡುಗಡೆಗೊಳ್ಳಲಿದೆ ಎಂದು ತಿಳಿಸಿದರು.

ವಿಕ್ರಾಂತ್ ಸಿನಿಮಾಕ್ಕೆ ಸುಮಾರು 35 ದಿನಗಳ ಕಾಲ ಚಿತ್ರೀಕರಣ ನಡೆದಿದೆ. ಬಂಟ್ವಾಳ ಪರಿಸರ ಕಳಸ, ಹೊರ ನಾಡು, ಉಪ್ಪಿನಂಗಡಿ, ಬಿ.ಸಿ ರೋಡ್ ಮೊದಲಾದ ಕಡೆಗಳಲ್ಲಿ ಸಿನಿಮಾಕ್ಕೆ ಚಿತ್ರೀಕರಣ ನಡೆದಿದೆ ಎಂದು ಚಿತ್ರ ನಿರ್ದೇಶಕ ನವೀನ್ ಮಾರ್ಲ ಕೊಡಂಗೆ ತಿಳಿಸಿದ್ದಾರೆ.

ಈ ಸಿನಿಮಾದಲ್ಲಿ ಬಹುತೇಕ ಯಕ್ಷಗಾನ ಕಲಾವಿದರು ಬಣ್ಣ ಹಚ್ಚಿದ್ದು ವಿಶೇಷ ಖ್ಯಾತ ಯಕ್ಷಗಾನ ಕಲಾವಿದ ಅರುವ ಕೊರಗಪ್ಪ ಶೆಟ್ಟಿ ಅವರು ಪಾತ್ರವೊಂದರಲ್ಲಿ ಕಾಣಿಸಿ ಕೊಂಡಿದ್ದಾರೆ.

ಇನ್ನುಳಿದಂತೆ ಯಕ್ಷ ಗಾನ ಕಲಾವಿ ದರಾದ ರಾಧಾಕೃಷ್ಣ ನಾವಡ ಮಧೂರು, ಬಂಟ್ವಾಳ ಜಯ ರಾಮ ಆಚಾರ್ಯ, ಕಡಬ ದಿನೇಶ್ ರೈ, ಕೋಡ ಪದವು ದಿನೇಶ್ ಶೆಟ್ಟಿಗಾರ್, ಪೂರ್ಣಿಮಾ ಯತೀಶ್ ರೈ ಮೊದಲಾದವರು ಬಣ್ಣ ಹಚ್ಚಿದ್ದಾರೆ ಎಂದರು.

ಇನ್ನುಳಿದಂತೆ ರಂಗ ಭೂಮಿಯ ಅರವಿಂದ ಬೋಳಾರ್, ರಮೇಶ್ ರೈ ಕುಕ್ಕುವಳ್ಳಿ ಎಚ್.ಕೆ ನಯನಾಡು, ಕೊಡಮಣ್ ಕಾಂತಪ್ಪ ಶೆಟ್ಟಿ, ಅಶೋಕ್ ಭಟ್ ಕಾಪುಕೊಲ್ಯ, ಸುನೀಲ್ ಕೆ. ಆರ್, ಸಂದೀಪ್ ಶೆಟ್ಟಿ ರಾಯಿ, ರಾಕೇಶ್ ಶೆಟ್ಟಿ, ಬಿಸಿ ರೋಡ್, ಸುನೀತಾ ಎಕ್ಕೂರ್, ಪವಿತ್ರ ಹೆಗ್ಡೆ , ಶೃತಿ ಭಟ್ ಕಾಸರಗೋಡು, ಅಕ್ಷಯ ಕೊಡ್‌ಮನ್ ಇದ್ದಾರೆ.

ನಾಯಕ ನಟನಾಗಿ ವಿನೋದ್ ಶೆಟ್ಟಿ ಮತ್ತು ಶೀತಲ್ ನಾಯಕ್ ನಾಯಕಿ ಯಾಗಿ ಅಭಿನಯಿಸಿದ್ದಾರೆ. ಸಿನಿಮಾಕ್ಕೆ ರವಿ ಸುವರ್ಣ ಛಾಯಾ ಗ್ರಹಣ ಒದಗಿಸಿದ್ದಾರೆ. ಸಾಹಿತ್ಯ ಎಚ್.ಕೆ ನಯನಾಡು, ನೃತ್ಯ ನಿರ್ದೇಶನ: ವಿನೋದ್ ರಾಜ್ ಬಂಟ್ವಾಳ, ಅನಿಲ್ ನಾಯಕ್, ಸಂಕಲನ : ಮಹಾಬಲೇಶ್ವರ ಹೊಳ್ಳ, ಕಲೆ : ದಿನೇಶ್ ಸುವರ್ಣ ರಾಯಿ.ಯುನಿಟ್ ಜಿ.ಆರ್.ಕೆ ಸುರತ್ಕಲ್, ಸಂಗೀತ ಸಾಹಿತ್ಯ ಭಾಸ್ಕರ್ ರಾವ್ ಬಿಸಿ ರೋಡ್, ಧ್ವನಿ ಮುದ್ರಣ ವೈಭವೀ ಆಡಿಯೋ ಸ್ಟುಡಿಯೋ ಬಿ.ಸಿ ರೋಡ್ ಈ ಸಿನಿಮಾಕ್ಕೆ ಅನುರಾಧ ಭಟ್ , ಭಾಸ್ಕರ್ ರಾವ್ ಹಾಗೂ ಯಕ್ಷಗಾನ ಭಾಗವತ ಗಿರೀಶ್ ರೈ ಕಕ್ಕೆ ಪದವು ಹಾಡಿದ್ದಾರೆ.

ಕಥೆ ಸಂಭಾಷಣೆ ನಿರ್ದೇಶನ ನವೀನ್ ಮಾರ್ಲ ಕೊಡಂಗೆ. ಸಹಾಯಕ ನಿರ್ದೇಶನ ಪುಷ್ಪರಾಜ್ ರೈ ಮಲಾರ್ ಬೀಡು, ಜಯರಾಜ್ ಹೆಜಮಾಡಿ. ತನ್ನ ಸಂಸಾರದ ಬಗ್ಗೆ ಚಿಂತಿಸದೆ, ಸಮಾಜ ಸೇವೆಗೆ ತನ್ನ ಸರ್ವಸ್ವವನ್ನು ಮುಡಿಪಾಗಿಸುವ ಯುವಕನ ಜೀವನದಲ್ಲಿ ನಡೆಯುವ ಘಟನೆಗಳನ್ನು ಬಿಂಬಿಸುವ ಕತೆಯನ್ನು ವಿಕ್ರಾಂತ್’ ಹೊಂದಿದೆ ಎಂದು ನವೀನ್ ತಿಳಿಸಿದರು.

ಪತ್ರಿಕಾಗೋಷ್ಡಿಯಲ್ಲಿ ಸಂಗೀತ ನಿರ್ದೇಶಕ ಭಾಸ್ಕರ ರಾವ್ ಬಿ ಸಿ ರೋಡು, ನಟ ವಿನೋದ್ ಶೆಟ್ಟಿ, ರಮೇಶ್ ರೈ ಕುಕ್ಕುವಳ್ಳಿ, ಶ್ರುತಿ ಭಟ್ ಉಪಸ್ಥಿತರಿದ್ದರು.

Comments are closed.