ಕರಾವಳಿ

ಐಸಿಸ್ ಮ್ಯಾಗ್ಜಿನ್’ನಲ್ಲಿ ಮುರ್ಡೇಶ್ವರದ ಶಿವನ ವಿಗ್ರಹದ ಶಿರಭಾಗ ಕತ್ತರಿಸಿ ಐಸಿಸ್ ಧ್ವಜದ ಚಿತ್ರ ಎಡಿಟ್ ಮಾಡಿ ಪ್ರಕಟ

Pinterest LinkedIn Tumblr

ಕಾರವಾರ: ಪ್ರಸಿದ್ಧ ಕ್ಷೇತ್ರಗಳಲ್ಲಿ ಒಂದಾದ ಉತ್ತರ ಕನ್ನಡದ ಜಿಲ್ಲೆಯ ಮುರುಡೇಶ್ವರದ ಬೃಹತ್ ಈಶ್ವರ ಪ್ರತಿಮೆ ಚಿತ್ರ ಜಗತ್ತಿನ ಕುಖ್ಯಾತ ಉಗ್ರ ಸಂಘಟನೆಯ ಪತ್ರಿಕೆಯಲ್ಲಿ ಪ್ರಕಟವಾಗಿದ್ದು, ಇದು ಉಗ್ರ ಸಂಘಟನೆಯ ದಾಳಿ ಸಂಚಿನ ಮುನ್ನೆಚ್ಚರಿಕೆಯೇ ಎಂಬ ಪ್ರಶ್ನೆ ಹುಟ್ಟುಹಾಕಿದೆ.

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲ್ಲೂಕಿನ ಮುರುಡೇಶ್ವರ ಶಿವನ ವಿಗ್ರಹದ ಶಿರವನ್ನು ಕತ್ತರಿಸಿದಂತೆ ಎಡಿಟ್ ಮಾಡಲಾದ ಫೋಟೊವನ್ನು ಉಗ್ರ ಸಂಘಟನೆ ‘ಐಸಿಸ್’ನ ಪತ್ರಿಕೆಯಲ್ಲಿ ಪ್ರಕಟಿಸಲಾಗಿದ್ದು, ಈ ಚಿತ್ರ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

‘ಐಸಿಸ್’ ಮುಖವಾಣಿ ಪತ್ರಿಕೆ ‘ದಿ ವಾಯ್ಸ್ ಆಫ್ ಹಿಂದ್’ನಲ್ಲಿ ಮುರುಡೇಶ್ವರದ ಶಿವನ ವಿಗ್ರಹವನ್ನು ಪ್ರಕಟಿಸಲಾಗಿದೆ. ಅದರ ಮೇಲೆ ‘ಇದು ನಕಲಿ ದೇವರನ್ನು ಒಡೆಯುವ ಸಮಯ’ (Its time to Break False Gods) ಎಂಬ ವಾಕ್ಯವನ್ನು ಬರೆಯಲಾಗಿದೆ. ಅಲ್ಲದೆ ಶಿವನ ಪ್ರತಿಮೆಯನ್ನು ಅರ್ಧಕ್ಕೆ ಕತ್ತರಿಸಿ, ತಲೆಯ ಭಾಗದಲ್ಲಿ ಉಗ್ರ ಸಂಘಟನೆಯ ಮಾದರಿಯ ಧ್ವಜ ಹಾರಾಡುತ್ತಿರುವಂತೆ ಚಿತ್ರಿಸಲಾಗಿದೆ.

ಈ ಪೋಟೋ ಮತ್ತು ಮಾಹಿತಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಇದರ ಸತ್ಯಾಸತ್ಯತೆ ಸಂಬಂಧಪಟ್ಟ ಇಲಾಖೆ ಕ್ರಮವಹಿಸಬೇಕು ಎಂದು ಜನರು ಆಗ್ರಹಿಸಿದ್ದಾರೆ.

Comments are closed.