ಉಡುಪಿ: ನಗರ ಜ್ಯುವೆಲ್ಲರಿ ಅಂಗಡಿಗೆ ಗ್ರಾಹಕರ ಸೋಗಿನಲ್ಲಿ ಬಂದ ಮಹಿಳೆಯರಿಬ್ಬರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವುಗೈದು ಪರಾರಿಯಾಗಿರುವ ಘಟನೆ ನಡೆದಿದೆ.
(ಸಾಂದರ್ಭಿಕ ಚಿತ್ರ)
ಉಡುಪಿ ಶಿವಳ್ಳಿ ಗ್ರಾಮದ ವಿದ್ಯಾಸಮುದ್ರ ಮಾರ್ಗ ಬಳಿ ಇರುವ ಸುಲ್ತಾನ್ ಡೈಮಂಡ್ ಆಂಡ್ ಗೋಲ್ಡ್ ಎಂಬ ಜುವೆಲ್ಲರಿ ಅಂಗಡಿಗೆ ಇಬ್ಬರು ಬುರ್ಖಾ ಧರಿಸಿದ ಮಹಿಳೆಯರು ಬಂದಿದ್ದು, ಸೇಲ್ಸ್ ಮೆನ್ ಬಳಿ ಚಿನ್ನದ ಬಳೆಗಳನ್ನು ತೋರಿಸುವಂತೆ ಹೇಳಿದ್ದರು. ಬೇರೆ ಬೇರೆ ಬಳೆಗಳನ್ನು ನೋಡುತ್ತಿದ್ದ ಮಹಿಳೆಯರು ಸೇಲ್ಸ್ಮೆನ್ ಗಮನವನ್ನು ಬೇರೆಡೆಗೆ ಸೆಳೆದು ಒಟ್ಟು 60 ಗ್ರಾಂ ತೂಕದ 4 ಚಿನ್ನದ ಬಳೆಗಳನ್ನು ಮೋಸದಿಂದ ತೆಗೆದುಕೊಂಡು ಹೋಗಿದ್ದಾರೆ. ಇದರ ಒಟ್ಟು ಮೌಲ್ಯ 3,00,000ರೂ. ಎಂದು ಅಂದಾಜಿಸಲಾಗಿದೆ.
ಈ ಬಗ್ಗೆ ಜುವೆಲ್ಲರಿಯ ಬ್ರ್ಯಾಂಚ್ ಮೇನೆಜರ್ ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Comments are closed.