ಕರಾವಳಿ

ಜನಾರ್ಧನ ಪೂಜಾರಿಯವರ ಆಶೀರ್ವಾದ ಪಡೆದ ಎಂ.ಎಲ್.ಸಿ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ ಭಂಡಾರಿ

Pinterest LinkedIn Tumblr

ಬಂಟ್ವಾಳ: ದಕ್ಷಿಣ ಕನ್ನಡ, ಉಡುಪಿ ಸ್ಥಳೀಯಾಡಳಿತ ಸಂಸ್ಥೆಗಳ ವಿಧಾನ ಪರಿಷತ್‌ ಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿ ಮಂಜುನಾಥ ಭಂಡಾರಿ ಅವರು ಬುಧವಾರ ಹಿರಿಯ ಕಾಂಗ್ರೆಸ್‌ ನಾಯಕ ಬಿ. ಜನಾರ್ದನ ಪೂಜಾರಿ ಅವರನ್ನು ಬಂಟ್ವಾಳದ ನಿವಾಸದಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದರು.

ಈ ವೇಳೆ ಮಾತನಾಡಿದ ಜನಾರ್ಧನ ಪೂಜಾರಿ, ಮಂಜುನಾಥ ಭಂಡಾರಿಯವರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ನೋವಿಗೆ ಸ್ಪಂದಿಸುವ ಸಹೃದಯಿ ನಾಯಕರಾಗಿದ್ದಾರೆ. ಅವರು ವಿದ್ಯಾರ್ಥಿ ದೆಸೆಯಿಂದಲೇ ಕಾಂಗ್ರೆಸ್‌ನಲ್ಲಿ ಸಕ್ರಿಯರಾಗಿದ್ದು, ಸಾಮಾನ್ಯ ಕಾರ್ಯಕರ್ತನಾಗಿ ಈ ಮಟ್ಟಕ್ಕೆ ಬೆಳೆದಿದ್ದಾರೆ. ಅನೇಕ ವರ್ಷಗಳ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿಯಾಗಿ ಭಂಡಾರಿ ಆಯ್ಕೆ ಅತ್ಯುತ್ತಮವಾಗಿದೆ. ಉಭಯ ಜಿಲ್ಲೆಯ ಅಭಿವೃದ್ಧಿಗೆ ತೊಡಗಿಸಿಕೊಳ್ಳಲು ಒಳ್ಳೆಯ ಅವಕಾಶ ಲಭಿಸಿದೆ. ಸ್ಥಳೀಯ ಸಂಸ್ಥೆಗಳ ಮತದಾರರು ಅವರನ್ನು ಗೆಲ್ಲಿಸಿ ಕೊಡುವ ವಿಶ್ವಾಸವಿದೆ ಎಂದರು.

ಅಭ್ಯರ್ಥಿ ಮಂಜುನಾಥ ಭಂಡಾರಿ ಮಾತನಾಡಿ, ಹಿರಿಯರಾದ ಜನಾರ್ದನ ಪೂಜಾರಿ ಅವರ ಆಶೀರ್ವಾದವೇ ನನಗೆ ಆರಂಭಿಕ ಗೆಲುವಾಗಿದೆ. ಉತ್ತಮ ರಾಜಕಾರಣಿಯಾಗಲು ಅವರೇ ನನಗೆ ಪ್ರೇರಣೆಯಾಗಿದ್ದಾರೆ ಎಂದರು.

Comments are closed.