ಕರಾವಳಿ

8 ವರ್ಷದ ಬಾಲಕಿಯ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ನೀಡಿ: ಮಂಗಳೂರು ಕಮಿಷನರ್​​ಗೆ 4ನೇ ತರಗತಿ ಬಾಲಕಿ ಮನವಿ

Pinterest LinkedIn Tumblr

ಮಂಗಳೂರು: ಉಳಾಯಿಬೆಟ್ಟುವಿನಲ್ಲಿ ಎಂಟು ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕೋರಿ ಬಾಲಕಿಯೊಬ್ಬಳು ಮಂಗಳೂರು ಸಿಟಿ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರಿಗೆ ಮನವಿ ಪತ್ರ ಸಲ್ಲಿಸಿ ಸಾಮಾಜಿಕ ಪ್ರಜ್ಞೆ ಮೆರದಿದ್ದಾಳೆ.

ಕುಳಾಯಿ ಮೂಲದ 4ನೇ ತರಗತಿಯಲ್ಲಿ ಓದುತ್ತಿರುವ ಚಾರ್ವಿ ನಿರಂಜನ್ ಪೊಲೀಸ್ ಆಯುಕ್ತರನ್ನು ಅವರ ಕಚೇರಿಯಲ್ಲಿ ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದ್ದು, ಅತ್ಯಾಚಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಈ ಮೂಲಕವಾದರೂ ನನ್ನಂತಹ ಸಣ್ಣ ಹೆಣ್ಣು ಮಕ್ಕಳಿಗೆ ಇಂತಹ ಘಟನೆಗಳು ಮರುಕಳಿಸದಂತೆ ಕೇಳಿಕೊಳ್ಳುತ್ತೇನೆ ಎಂದು ಮನವಿ ಮಾಡಿದ್ದಾಳೆ. ಇದಕ್ಕೆ‌ ಪ್ರತಿಕ್ರಿಯಿಸಿದ ಪೊಲೀಸ್ ಆಯುಕ್ತರು, ಪ್ರಕರಣದಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಚಾರ್ವಿಗೆ ಭರವಸೆ ನೀಡಿದರು.

ಈ ಬಗ್ಗೆ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಕಮಿಷನರ್ ಶಶಿಕುಮಾರ್ ಬಾಲಕಿಯ ಕಾಳಜಿ ಹಾಗೂ ಪೋಷಕರ ಪ್ರೋತ್ಸಾಹದ ಬಗ್ಗೆ ಶ್ಲಾಘಿಸಿದ್ದಾರೆ.

Comments are closed.