ಕರಾವಳಿ

ಮಂಗಳೂರಿನಲ್ಲಿ ಬೈಕ್ ಸವಾರನ ಚಿನ್ನದ ಸರ ಸುಲಿಗೆ; ಮಂಗಳಮುಖಿಯ ಬಂಧನ

Pinterest LinkedIn Tumblr

ಮಂಗಳೂರು: ನಗರದ ನಂತೂರು ಪದವು ಬಳಿ ಬೈಕ್ ಸವಾರನನ್ನು ತಡೆದು ನಿಲ್ಲಿಸಿ ಚಿನ್ನದ ಸರವನ್ನು ಸುಲಿಗೆಗೈದ ಮಂಗಳಮುಖಿಯನ್ನು ಕದ್ರಿ ಠಾಣೆಯ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಮೂಲತಃ ಮೈಸೂರಿನ ಅಗ್ರಹಾರದ ಪ್ರಸ್ತುತ ಬೆಂಗಳೂರಿನ ನಿವಾಸಿ ಅಭಿಷೇಕ್ ಅಲಿಯಾಸ್ ಗೊಂಬೆ ಯಾನೆ ಅನಾಮಿಕ (27) ಬಂಧಿತ ಆರೋಪಿ.

ಘಟನೆ ವಿವರ…
ಗಣೇಶ್ ಶೆಟ್ಟಿ ಎಂಬವರು ಎರಡು ತಿಂಗಳ ಹಿಂದೆ ತನ್ನ ಬೈಕ್‌ನಲ್ಲಿ ನಂತೂರು ಪದವಿನಿಂದ ಬಿಎಸ್‌ಎನ್‌ಎಲ್ ಎಕ್ಸ್ಚೆಂಜ್ ಬಳಿಯ ರಸ್ತೆಯಲ್ಲಿ ತೆರಳುತ್ತಿದ್ದಾಗ ಬೈಕಿಗೆ ಅಡ್ಡ ಬಂದ ಮಂಗಳಮುಖಿ ಗಣೇಶ್ ಶೆಟ್ಟಿಯ ಮುಖಕ್ಕೆ ಪೆಪ್ಪರ್ ಸ್ಪ್ರೇ ಮಾಡಿ 24 ಗ್ರಾಂ ತೂಕದ ಚಿನ್ನದ ಸರ ಸುಲಿಗೆ ಮಾಡಿದ್ದ ಬಗ್ಗೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದೊಂದಿಗೆ ಪೊಲೀಸರು ಮೂರು ಸರಗಳ್ಳತನ ಪ್ರಕರಣವನ್ನು ಪತ್ತೆ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಆರೋಪಿಯನ್ನು ಬಂಧಿಸಿದ್ದು ಮಂಗಳಮುಖಿಯಿಂದ ಸುಮಾರು 71 ಗ್ರಾಂ ತೂಕದ ಮೂರು ಚಿನ್ನದ ಸರಗಳನ್ನು ವಶಪಡಿಸಿಕೊಳ್ಳಲಾಗಿದೆ.

Comments are closed.