ಬೆಳಗಾವಿ: ಬೆಳಗಾವಿಯಲ್ಲಿ ಪುಂಡರ ಗಲಾಟೆ ವಿಚಾರದಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಂಡು ಭಯ ಹುಟ್ಟಿಸುತ್ತೇವೆಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಶನಿವಾರ ಹೇಳಿದ್ದಾರೆ.
ಘಟನೆ ಕುರಿತು ಮಾಧ್ಯಮವೊಂದರ ಜೊತೆಗೆ ಮಾತನಾಡಿದ ಅವರು, ಬೆರಳೆಣಿಕೆಯಷ್ಟು ಜನರು ಮಾಡುತ್ತಿರುವ ಕೃತ್ಯ ಇದಾಗಿದೆ. ತಪ್ಪಿತಸ್ಥರನ್ನು ಯಾವುದೇ ಕಾರಣಕ್ಕೆ ನಮ್ಮ ಸರ್ಕಾರ ಬಿಡಲ್ಲ. ಅವರ ವಿರುದ್ಧ ಕಾನೂನು ಕ್ರಮಗಳ ಕೈಗೊಂಡು ಇಂತಹ ಘಟನೆ ಮರುಕಳಿಸದಂತೆ ಕ್ರಮ ತೆಗೆದುಕೊಳ್ಳುತ್ತೇವೆ. ಇಂತಹ ಪುಂಡಾಟಗಳನ್ನು ಹತ್ತಿಕ್ಕುತ್ತೇವೆ.
ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಈಗಾಗಲೇ ಪೊಲೀಸರಿಗೆ ಸೂಚಿಸಿದ್ದೇವೆ. ತಪ್ಪಿತಸ್ಥರಿಗೆ ಈ ಬಾರಿ ಭಯ ಹುಟ್ಟಿಸುತ್ತೇವೆ. ಪೊಲೀಸರು ತೆಗೆದುಕೊಳ್ಳುವ ಕ್ರಮಗಳನ್ನು ಕಾದು ನೋಡಿ ಎಂದು ತಿಳಿಸಿದ್ದಾರೆ.
Comments are closed.