ಕರಾವಳಿ

ಉದ್ಯಮದಲ್ಲಿ ನಷ್ಟ, ಸಾಲಬಾಧೆಯಿಂದ ಮನನೊಂದು ಬಂಟ್ವಾಳದ ಉದ್ಯಮಿ ಆತ್ಮಹತ್ಯೆ

Pinterest LinkedIn Tumblr

ಮಂಗಳೂರು: ಸಾಲ ಬಾಧೆಯಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್ ನೋಟ್ ಬರೆದಿಟ್ಟು ಉದ್ಯಮಿಯೋರ್ವರು ಲಾಡ್ಜ್ ಒಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ಬೆಳಕಿಗೆ ಬಂದಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಕನಪಾದೆ ನಿವಾಸಿ ಕೃಷ್ಣ ಟಿ. ಎಂದು ಗುರುತಿಸಲಾಗಿದೆ.

ಬಿಸಿರೋಡಿನ ಖಾಸಗಿ ಹೋಟೆಲ್ ರೂಮಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಇವರು ಐಸ್ ಕ್ರೀಂ ಸಂಸ್ಥೆಯೊಂದರ ಮಾಲಕರಾಗಿದ್ದು ಜೊತೆಗೆ ಕ್ಲಬ್ ಕೂಡಾ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ.

ಉದ್ಯಮದಲ್ಲಿ ನಷ್ಟವಾಗಿದ್ದು, ಸಾಲದಬಾಧೆಯಿಂದ ಬಳಲುತ್ತಿರುವುದಾಗಿ ಡೆತ್ ನೋಟಿನಲ್ಲಿ ಬರೆದು ಕಿಸೆಯಲ್ಲಿಟ್ಟಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಠಾಣಾ ಪಿಎಸ್‌ಐ ಅವಿನಾಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Comments are closed.