ಕರಾವಳಿ

ಮಂಗಳೂರಿನಲ್ಲಿ ಮೀನುಗಾರನನ್ನು ತಲೆಕೆಳಗೆ ತೂಗು ಹಾಕಿ ಹಿಂಸೆ: ಕೊಲೆಯತ್ನ ಪ್ರಕರಣ ದಾಖಲು

Pinterest LinkedIn Tumblr

ಮಂಗಳೂರು: ಇಲ್ಲಿನ ಬಂದರ್ ನಲ್ಲಿ ಮೀನುಗಾರನೊಬ್ಬನನ್ನು ಬೋಟ್ ಕ್ರೇನ್ ಒಂದಕ್ಕೆ ತಲೆಕೆಳಗೆ ತೂಗು ಹಾಕಿ ಸಹ ಕಾರ್ಮಿಕರೆನ್ನಲಾದವರು ದೌರ್ಜನ್ಯ ಎಸಗಿದ ಘಟನೆ ಬೆಳಕಿಗೆ ಬಂದಿದೆ. ದೌರ್ಜನ್ಯಕ್ಕೆ ಒಳಗಾದ ವ್ಯಕ್ತಿಯನ್ನು ಆಂಧ್ರಪ್ರದೇಶ‌ ಮೂಲದ ಬೆಸ್ತ ಸಮುದಾಯದ ವೈಲ ಶೀನು ಎಂದು ಗುರುತಿಸಲಾಗಿದೆ.

ಈತನನ್ನು ಇತರ ಮೀನುಗಾರ ಕಾರ್ಮಿಕರು ಬೋಟ್ ನ ಕ್ರೇನ್ ಗೆ ಕಾಲು ಕಟ್ಟಿ ತಲೆಕೆಳಗಾಗಿ ತೂಗು ಹಾಕಿ ‌ಹಿಂಸಿಸುತ್ತಿರುವ ಹಾಗೂ ಹೊಡೆಯುವಂತೆ ಪ್ರೇರೆಪಿಸುತ್ತಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮೊಬೈಲ್ ಕಳವು‌ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ರೀತಿಯಾಗಿ ತೂಗು ಹಾಕಿದ್ದರು ಎಂದು ಪೊಲೀಸ್ ಪ್ರಾಥಮಿಕ ಮಾಹಿತಿ ತಿಳಿಸಿದೆ.

ಈ ಘಟನೆ ಕೆಲ ದಿನಗಳ ಹಿಂದೆ ನಡೆದಿದ್ದು , ದೌರ್ಜನ್ಯ ಎಸಗಿದ ಆರೋಪಿಗಳ ವಿರುದ್ಧ ಪಾಂಡೇಶ್ವರ ಠಾಣೆ ಪೊಲೀಸರು ಕೊಲೆಯತ್ನ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.

Comments are closed.