ಕರ್ನಾಟಕ

‘ನಾನು ಭಯಸ್ತನಲ್ಲ, ಮಾಗಡಿ ರಸ್ತೆಯಲ್ಲಿ ಪೋಲಿ ಆಟಗಳನ್ನು ಆಡಿ ಬಂದಿದ್ದಕ್ಕೆ ಚರಿತ್ರೆಯಿದೆ’: ಹಂಸಲೇಖ

Pinterest LinkedIn Tumblr

ಬೆಂಗಳೂರು: ‘ನಾನು ಭಯಸ್ತನಲ್ಲ. ಮಾಗಡಿ ರಸ್ತೆಯಲ್ಲಿ ದೊಡ್ಡ ದೊಡ್ಡ ಪೋಲಿ ಆಟಗಳನ್ನು ಆಡಿ ಬಂದಿದ್ದೇನೆ. ಅದಕ್ಕೊಂದು ಚರಿತ್ರೆಯೇ ಇದೆ’ ಎಂದು ಸಂಗೀತ ನಿರ್ದೇಶಕ ಹಂಸಲೇಖ ಹೇಳಿದರು.

ಬಹುರೂಪಿ ಪ್ರಕಾಶನ ಹಾಗೂ ಲಂಡನ್‌ನ ಬಸವ ಅಂತರರಾಷ್ಟ್ರೀಯ ಪ್ರತಿಷ್ಠಾನವು ನಗರದಲ್ಲಿ ಭಾನುವಾರ ಹಮ್ಮಿಕೊಂಡ ಪ್ರೊ.ಎಸ್‌.ಜಿ.ಸಿದ್ಧರಾಮಯ್ಯ ಅವರ ಆತ್ಮಕಥೆ ‘ಯರೆಬೇವು’ ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ನಾನು ವೇದಿಕೆಯೊಂದರಲ್ಲಿ ಆಡಿದ ಮಾತುಗಳು ವಿವಾದವಾಯಿತು. ಆಗ ಎಸ್‌.ಜಿ. ಸಿದ್ಧರಾಮಯ್ಯ ಅವರು ನನ್ನ ಬೆಂಬಲಕ್ಕೆ ನಿಂತರು. ಬ್ಲಡ್‌ ಫ್ರೈ ಬಗ್ಗೆ ಮಾತನಾಡಿದ್ದಕ್ಕೆ ಬ್ಲಡ್‌ ತಿನ್ನುವುದನ್ನು ಮರೆತವರು ಸಹ ನನ್ನ ಮೇಲೆ ಮುಗಿಬಿದ್ದರು ಎಂದು ಬೇಸರ ವ್ಯಕ್ತಪಡಿಸಿದರು.

‘ನುಡಿದರೆ ಮುತ್ತಿನ ಹಾರದಂತೆ ಇರಬೇಕು’ ಎಂದು ಹೇಳಲಾಗುತ್ತದೆ. ಆದರೆ, ಕೆಲ ಸಂದರ್ಭದಲ್ಲಿ ಮಾತು ಕುದಿಯುವ ಸಲಾಕೆಯೂ ಆಗುತ್ತದೆ. ದೇಶಿ ನೆಲೆಯಿಂದ ಬಂದವನು ನಾನು. ಹೀಗಾಗಿ ಕೆಲವು ವೇಳೆ ನಮ್ಮೊಳಗಿನ ಮಾತು ಹೊರಹೊಮ್ಮುತ್ತದೆ’ ಎಂದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ ನನ್ನ ದೇಸಿ ಶಾಲೆಗೆ ಸಹಾಯ ಮಾಡಿದ್ದರು. ಸಿದ್ದರಾಮಯ್ಯ ಮತ್ತೊಮ್ಮೆ ನಾಡಿನ ಮುಖ್ಯಮಂತ್ರಿ ಆಗಲಿ. ಧರ್ಮೋಕ್ರಸಿಯನ್ನು ಬದಿಗೆ ಸರಿಸಿ ಡೆಮಾಕ್ರಸಿಯನ್ನು ಉಳಿಸಲಿ ಎಂದರು.

 

Comments are closed.