ಬೆಂಗಳೂರು: ಕನ್ನಡ ಚಿತ್ರರಂಗದ ಪವರ್ ಸ್ಟಾರ್, ಅಭಿಮಾನಿಗಳ ಪಾಲಿನ ರಾಜಕುಮಾರ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ನಿಧನರಾಗಿ ಎರಡು ತಿಂಗಳು ಕಳೆದಿವೆ. ಪ್ರತಿದಿನ ಅಪ್ಪು ಅವರನ್ನು ನೆನೆಯುವ ಹಾಗೂ ಗೌರವ ಸಲ್ಲಿಸುವ ಕೆಲಸಗಳು ನಡೆಯುತ್ತಲೇ ಇದೆ. ಇದೀಗ ಕೆಎಂಎಫ್ ಕೂಡ ಅಪ್ಪು ಅವರಿಗೆ ವಿಶೇಷವಾಗಿ ಗೌರವ ಸಲ್ಲಿಸಿದೆ. ಇದನ್ನು ಕಂಡ ಅಭಿಮಾನಿಗಳು ಭಾವುಕರಾಗಿದ್ದಾರೆ. ಯಾವುದೇ ಹಣ ಪಡೆಯದೇ ಅಪ್ಪು ನಂದಿನಿ ಜಾಹೀರಾತಿನಲ್ಲಿ ನಟಿಸಿದ್ದರು. ಬ್ರ್ಯಾಂಡ್ ಅಂಬಾಸಿಡರ್ ಆಗಿದ್ದರು. ಹಾಗಾಗಿ ಕೆಎಂಎಫ್ ವತಿಯಿಂದ ಅವರಿಗೆ ವಿಶೇಷ ಗೌರವ ಸಲ್ಲಿಸಲಾಗಿದೆ.
ನಂದಿನ ಹಾಲಿನ ಪ್ಯಾಕೆಟ್ ಮೇಲೆ ನಗು ಮುಖದ ಸರದಾರ ಪುನೀತ್ ರಾಜ್ಕುಮಾರ್ ಭಾವಚಿತ್ರವನ್ನು ಮುದ್ರಿಸುವ ಮೂಲಕ ವಿಶೇಷ ಗೌರವವನ್ನ ನೀಡಲಾಗಿದೆ. ಅಂದು ನಂದಿನಿ ಹಾಲಿನ ಜಾಹೀರಾತು ರಾಯಭಾರಿಯಾಗಿದ್ದ ಡಾ. ರಾಜ್ಕುಮಾರ್, ಯಾವುದೇ ಸಂಭಾವನೆ ತೆಗೆದುಕೊಳ್ಳದೆ ರೈತರ ಪರ ನಿಂತಿದ್ದರು. ಪುನೀತ್ ರಾಜ್ಕುಮಾರ್ ಕೂಡ ಅಣ್ಣಾವ್ರ ಹಾದಿಯನ್ನು ಹಿಡಿದ್ದಿದ್ದರು. ಹೀಗಾಗಿ ಕೆಎಂಎಫ್ ವಿಶೇಷವಾಗಿ ಅಪ್ಪುಗೆ ಗೌರವ ಸಲ್ಲಿಸಿದೆ.
Comments are closed.