ಕರ್ನಾಟಕ

ಮುಸ್ಲಿಂ ಗೂಂಡಾಗಳು ಸಜ್ಜನ ಕಾರ್ಯಕರ್ತನನ್ನು ಕೊಲೆ ಮಾಡಿದ್ದಾರೆ: ಕೆ.ಎಸ್ ಈಶ್ವರಪ್ಪ ಆರೋಪ

Pinterest LinkedIn Tumblr

ಬೆಂಗಳೂರು: ಡಿಕೆಶಿ ಪ್ರಚೋದನಕಾರಿ ಹೇಳಿಕೆಯ ಪ್ರೇರಣೆ ಪಡೇದು ಮುಸ್ಲಿಂ ಗೂಂಡಾಗಳು ಶಿವಮೊಗ್ಗದಲ್ಲಿ ಭಾನುವಾರ ರಾತ್ರಿ ಯುವಕನ ಕೊಲೆ ಮಾಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್​ ಈಶ್ವರಪ್ಪ ಬೆಂಗಳೂರಿನಲ್ಲಿ ಗಂಭೀರ ಆರೋಪ ಮಾಡಿದ್ದಾರೆ.

ಭಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ವಿಚಾರವಾಗಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನಿನ್ನೆ ಮುಸಲ್ಮಾನ ಗೂಂಡಾಗಳು ನಮ್ಮ ಸಜ್ಜನ ಕಾರ್ಯಕರ್ತನನ್ನು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಇನ್ನು ಶಿವಮೊಗ್ಗದಲ್ಲಿ ಇದುವರೆಗೂ ಮುಸಲ್ಮಾನ ಗೂಂಡಾಗಳು ಬಾಲ ಬಿಚ್ಚಿರಲಿಲ್ಲಿ, ಆದರೆ ಡಿಕೆಶಿಯವರ ಪ್ರಚೋದನಕಾರಿ ಹೇಳಿಕೆಗಳಿಂದ ಇವರಿಗೆ ಕುಮ್ಮಕ್ಕು ಸಿಕ್ಕಂತಾಗಿದೆ ಎಂದರು

ಅಲ್ಲದೆ ಮುಸಲ್ಮಾನ ಗೂಂಡಾಗಳಿಗೆ ಒಬ್ಬ ಕಾರ್ಯಕರ್ತನ ಕೊಲೆ ಮಾಡುವಷ್ಟು ಧೈರ್ಯ ಬಂದಿದ್ದು, ಈ ಕುರಿತು ಸರ್ಕಾರ ತನಿಖೆ ನಡೆಸುತ್ತಿದೆ ಎಂದರು.

Comments are closed.