ಕರಾವಳಿ

ಕುಂದಾಪುರದ ಉಳ್ಳೂರು-74, ರಟ್ಟಾಡಿ ಪರಿಸರದಲ್ಲಿ ಅಕ್ರಮ ಮರಳುಗಾರಿಕೆಗೆ ದಾಳಿ, 3 ಟಿಪ್ಪರ್ ವಶ

Pinterest LinkedIn Tumblr

ಕುಂದಾಪುರ: ತಾಲೂಕಿನ ಎರಡು ಕಡೆಗಳಲ್ಲಿ ಅಕ್ರಮ ಮರಳುಗಾರಿಕೆಯ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿ ಸಂದೀಪ್ ಜಿ. ಯು ಮಾರ್ಗದರ್ಶನದಲ್ಲಿ ಕುಂದಾಪುರ ತಾಲ್ಲೂಕಿನ 74 ನೇ ಉಳ್ಳೂರು ಪರಿಸರದ ಕಳಿನಜೆಡ್ಡು ಹಾಗೂ ರಟ್ಟಾಡಿ ಹೆಮಣ್ಣು ಪರಿಸರದಲ್ಲಿ ಅನಧಿೃತವಾಗಿ ಮರಳು ಗಣಿಗಾರಿಕೆಗೆ ನಡೆಸಿ ಸಾಗಾಟ ನಡೆಸುತ್ತಿದ್ದ ಮರಳು ದಕ್ಕೆಗೆ ದಾಳಿ ನಡೆಸಿದ ಗಣಿ ಇಲಾಖೆಯ ಭೂವಿಜ್ಞಾನಿ ಸಂಧ್ಯಾ ಮರಳು ದಕ್ಕೆಯಲ್ಲಿದ್ದ ಮೂರು ಮರಳು ತುಂಬಿದ ಟಿಪ್ಪರ್ ಲಾರಿಗಳನ್ನು ವಶಕ್ಕೆ ಪಡೆದಿದ್ದಾರೆ.

ಮುಂದಿನ ಕ್ರಮ ವಹಿಸುವ ಸಲುವಾಗಿ ವಶಕ್ಕೆ ಪಡೆಯಲಾದ ಲಾರಿಗಳನ್ನು ಅಮಾಸೆಬೈಲು ಪೊಲೀಸ್ ಠಾಣಾ ಸುಪರ್ದಿಯಲ್ಲಿ ಇರಿಸಲಾಗಿದೆ ಎಂದು ತಿಳಿದುಬಂದಿದೆ.

Comments are closed.