ಕರಾವಳಿ

ಕೋಟ ಮಣೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಓರ್ವ ಮೃತ್ಯು, ಮೂವರಿಗೆ ಗಾಯ

Pinterest LinkedIn Tumblr

ಕುಂದಾಪುರ: ಉಡುಪಿ ಜಿಲ್ಲೆ ಕೋಟದ ಮಣೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಚರ್ ವಾಹನ ಹಾಗೂ ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು ಮೂವರು ಗಂಭೀರ ಗಾಯಗೊಂಡ ಘಟನೆ ಮಂಗಳವಾರ ನಡೆದಿದೆ.

ಮೃತ ಸವಾರ ಪ್ರಸನ್ನ ದೇವಾಡಿಗ ಎಂದು ಗುರುತಿಸಲಾಗಿದೆ.

ಮಂಗಳೂರಿಂದ ಕುಂದಾಪುರ ಕಡೆಗೆ ಚಲಿಸುತ್ತಿದ್ದ ಇಚರ್ ವಾಹನ ಕೋಟ ಮಣೂರು ಬೊಬ್ಬರ್ಯ ಕಟ್ಟೆ ಸಮೀಪ ರಾಷ್ಟ್ರೀಯ ಹೆದ್ದಾರಿ 66ರ ಮಧ್ಯೆ ಕೆಟ್ಟು ನಿಂತಿದ್ದು ಅದೇ ದಾರಿಯಾಗಿ ಕೋಟದಿಂದ ಕುಂಭಾಶಿ ಕಡೆಗೆ ಚಲಿಸುತ್ತದ್ದ ಮೂವರು ಬೈಕ್ ಸವಾರರು ಮುಂದೆ ತೆರಳುತ್ತಿದ್ದ ಬಸ್ಸ್ ನಡುವೆ ಕೆಟ್ಟು ನಿಂತ ಇಚರ್ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಓರ್ವ ಗಂಭೀರ ಗಾಯಗೊಂಡಿದ್ದು ಅವರನ್ನು (ಪ್ರಸನ್ನ) ಆಸ್ಪತ್ರೆ ಸಾಗಿಸುವ ಮಧ್ಯೆ ಸಾವನ್ನಪ್ಪಿದ್ದಾರೆ.

ಮತ್ತೋರ್ವ ಬೈಕ್ ಸವಾರರಿಬ್ಬರು ಗಂಭೀರ ಗಾಯಗೊಂಡಿದ್ದು ಇಚರ್ ವಾಹನ ಚಾಲಕನು ಕೂಡ ಗಾಯಗೊಂಡಿದ್ದಾರೆ ಎನ್ನಲಾಗಿದೆ.

‌ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.