ಕರ್ನಾಟಕ

ಮಂಗಳಮುಖಿ ಸರ್ಕಾರ ಎಂಬ ಸಿ.ಎಂ. ಇಬ್ರಾಹಿಂ ಹೇಳಿಕೆಗೆ ಬಿ. ಮಂಜಮ್ಮ ಜೋಗತಿ ಬೇಸರ..!

Pinterest LinkedIn Tumblr

ಬೆಂಗಳೂರು: ಪ್ರಸ್ತುತ ರಾಜ್ಯದಲ್ಲಿರುವುದು, ಗಂಡಸೂ ಅಲ್ಲದ ಹೆಂಗಸೂ ಅಲ್ಲದ ಸರ್ಕಾರ ಮಂಗಳಮುಖಿ ಸರ್ಕಾರ ಎಂಬ ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿಕೆಗೆ ಜಾನಪದ ಆಕಾಡೆಮಿ ಅಧ್ಯಕ್ಷೆ ಬಿ. ಮಂಜಮ್ಮ ಜೋಗತಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಇಬ್ರಾಹಿಂ ಹೇಳಿಕೆಯ ವರದಿಗೆ ಪ್ರತಿಕ್ರಿಯಿಸಿ ಟ್ವೀಟ್ ಮಾಡಿರುವ ಅವರು, ‘ನನ್ನ ತಂದೆ ಕೂಡ ಹೀಗೆ ಹೇಳಿದ್ದರು- ಗಂಡಾಗಿದ್ದರೆ ಕೆಲಸ ಕೊಡಿಸುತ್ತಿದ್ದೆ, ಹೆಣ್ಣಾಗಿದ್ದರೆ ಮದುವೆ ಮಾಡಿಸುತ್ತಿದ್ದೆ, ಕುರುಡ ಕುಂಟ ಆಗಿದ್ದರೆ ಮನೆಯಲ್ಲೇ ಇರಿಸಿಕೊಂಡು ಊಟ ಹಾಕುತ್ತಿದ್ದೆ. ನಾನು ಮಂಗಳಮುಖಿ, ಕಲಾವಿದೆ, ಕನ್ನಡತಿ. ಸಮಾಜ ಗೌರವಿಸುತ್ತಿದೆ ನಮ್ಮನ್ನು. ಹೀಗೆ ಅವಮಾನ ಮಾಡಬಾರದಿತ್ತು ಸರ್. ನಿಮ್ಮ ರಾಜಕೀಯಕ್ಕೆ ನೀವು ಕೈ ತಟ್ಟಿದ್ದೀರಿ ಇವತ್ತು!’ ಎಂದು ಉಲ್ಲೇಖಿಸಿದ್ದಾರೆ

‘ಗಂಡಸು ಅಲ್ಲದ ಇತ್ತ ಹೆಂಗಸು ಅಲ್ಲದ ಮಂಗಳಮುಖಿಯರ ಸರ್ಕಾರವಿದು. ಚಪ್ಪಾಳೆ ತಟ್ಟಿಬಿಡುತ್ತಾರೆ. ಏನಾದರೂ ಆರೋಪ ಮಾಡಿದರೆ ಕಿಸಿಕ್ ಎಂದು ನಗಾಡ್ತಾರೆ, ಏನು ಮಾಡೋಣ ಇದು ಮಂಗಳಮುಖಿ ಸರ್ಕಾರ’ ಎಂದು ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಆರೋಪಿಸಿದ್ದರು.

 

Comments are closed.