ಕರಾವಳಿ

ಮಂಗಳೂರಿನಲ್ಲಿ ರೌಡಿ ಶೀಟರ್ ರಾಘವೇಂದ್ರ ಕೊಲೆ; 9 ಮಂದಿ ಬಂಧನ

Pinterest LinkedIn Tumblr

ಮಂಗಳೂರು: ಇತ್ತೀಚೆಗೆ ನಡೆದ ರೌಡಿಶೀಟರ್ ರಾಘವೇಂದ್ರ ಕೊಲೆ ಪ್ರಕರಣದ ಆರೋಪಿಗಳು ಮತ್ತು ಸಹಕಾರ ನೀಡಿದವರು ಸೇರಿದಂತೆ ಒಟ್ಟು 9 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಸುರತ್ಕಲ್ ಇಡ್ಯಾ ನಿವಾಸಿ ಸಂದೀಪ್ (45), ಕೃಷ್ಣಾಪುರದ ಸಂದೀಪ್ ದೇವಾಡಿಗ ಯಾನೆ ಸ್ಯಾಂಡಿ (32), ಸುರತ್ಕಲ್ ತಡಂಬೈಲ್ ನಿವಾಸಿ ಲಿಖಿತ್ (31), ತೋಟಬೆಂಗ್ರೆಯ ದೀಕ್ಷಿತ್ ಯಾನೆ ಕಕ್ಕೆ ದೀಕ್ಷಿತ್ (23 ) ಮೀನಕಳಿಯ ನಿವಾಸಿ ತುಷರ್ ಅಮೀನ್ ( 30), ಪಂಜಿಮೊಗರಿನ ವಿನೋದ್ ಕುಮಾರ್ (32) ಬೈಕಂಪಾಡಿಯ ಲತೇಶ್ ಜೋಗಿ (27), ಬೈಕಂಪಾಡಿಯ ಸಂದೀಪ್ ಪುತ್ರನ್ (36), ಮೂಡುಶೆಡ್ಡೆಯ ಅಕ್ಷಿತಾ ( 28) ಬಂಧಿತ ಆರೋಪಿಗಳು.

ಆರೋಪಿಗಳನ್ನು ಭಾನುವಾರ ನ್ಯಾಯಾಧೀಶರ ಎದುರು ಹಾಜರುಪಡಿಸಲಾಗಿದೆ. ಈ ಆರೋಪಿಗಳು ರಾಘವೇಂದ್ರ ಹತ್ಯೆಗೆ ಸಹಕರಿಸಿರುವ, ಸಂಚು ರೂಪಿಸಿರುವ, ಹಣಕಾಸಿನ ನೆರವು ನೀಡಿರುವ, ಕೊಲೆ ಕೃತ್ಯ ನಡೆಸಿದ ಬಳಿಕ ತಪ್ಪಿಸಿಕೊಳ್ಳಲು ಆಶ್ರಯ ನೀಡಿದವರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

 

Comments are closed.