ಕರಾವಳಿ

ನಾವುಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರ್ಕಾರಿ ಬಸ್‌ಗೆ ಕಾರು ಡಿಕ್ಕಿ- ಮೂವರಿಗೆ ಗಾಯ

Pinterest LinkedIn Tumblr

ಕುಂದಾಪುರ: ಬೈಂದೂರು ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ಸರ್ಕಾರಿ ಬಸ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಾಯಗೊಂಡ ಘಟನೆ ಸಂಭವಿಸಿದೆ.

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾವುಂದದಲ್ಲಿ ಸರಕಾರಿ ಬಸ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿತು. ಕಾರು

ಕುಂದಾಪುರದಿಂದ ಭಟ್ಕಳ ಕಡೆಗೆ ಸಾಗುತ್ತಿತ್ತು. ಗಾಯಾಳುಗಳನ್ನು ಸ್ಥಳೀಯರ ಸಹಾಯದಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಬೈಂದೂರು ಠಾಣೆ ಪಿಎಸೈ ಪವನ್ ನಾಯಕ್ ಭೇಟಿ ನೀಡಿದ್ದಾರೆ.

Comments are closed.