ಕರಾವಳಿ

ಭಾರಿ ಮಳೆ: ಜಿಲ್ಲೆಯಲ್ಲಿ ಈವರೆಗೆ 24 ಕೋಟಿ ರೂ. ನಷ್ಟ- ಡಿಸಿ ಕೂರ್ಮಾರಾವ್ ಎಂ.

Pinterest LinkedIn Tumblr

ಉಡುಪಿ: ನಿರಂತರವಾಗಿ ಸುರಿಯುತ್ತಿರುವ ಹಿನ್ನೆಲೆ ಉಡುಪಿ ಜಿಲ್ಲೆಯಲ್ಲಿ 24.73 ಕೋಟಿ ಹಾನಿ ಸಂಭವಿಸಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಜುಲೈ 1 ರಿಂದ ಇದುವರೆಗಿನ ವಾಡಿಕೆ ಮಳೆ 367 ಮಿಮಿ ಆಗಿದ್ದು, ಇದುವರೆಗೆ 832 ಮಿಮಿ ಮಳೆಯಾಗಿದೆ. 250 ಹೆಕ್ಟೇರ್ ಭತ್ತ ಬೆಳೆ ಹಾನಿಯಾಗಿದೆ. ನಗರ ಪ್ರದೇಶದಲ್ಲಿ 93 ಕಿಲೋಮೀಟರ್, ಗ್ರಾಮೀಣ ಭಾಗದ 685 ಕಿಲೋಮೀಟರ್ ರಸ್ತೆ , ಜಿಲ್ಲಾ ಹಾಗೂ ರಾಜ್ಯಮಟ್ಟದ 7.5 ಕಿಮೀ ಮುಖ್ಯ ರಸ್ತೆ ಹಾಳಾಗಿದ್ದು ,13 ಸೇತುವೆಗಳು ಹಾನಿ ಉಂಟಾಗಿದೆ. ಜಿಲ್ಲೆಯಲ್ಲಿ 1515 ವಿದ್ಯುಚ್ಛಕ್ತಿ ಕಂಬಗಳು ಬಿದ್ದುಹೋಗಿವೆ , 47 ಕಿಲೋಮೀಟರ್ ರಷ್ಟು ವಿದ್ಯುತ್ ತಂತಿಗಳು ಹಾಳಾಗಿದ್ದು , 64 ಮನೆಗಳಿಗೆ
ಭಾಗಶಃ ಹಾನಿಯಾಗಿ ಒಟ್ಟು ಅಂದಾಜು 24.73 ಕೋಟಿಯಷ್ಟು ನಷ್ಟವಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಇನ್ನೂ ಕೂಡ ನಿರಂತರವಾಗಿ ಮಳೆ ಮುಂದುವರೆದಿದ್ದು, ನಷ್ಟದ ನಿಖರ ಮೊತ್ತ ಮೌಲ್ಯಮಾಪನ ಮಾಡಲು ಅಸಾಧ್ಯವಾಗಿದ್ದು, ನಷ್ಟದ ಪ್ರಮಾಣ ಇನ್ನೂ ಹೆಚ್ಹುವ ಸಾಧ್ಯತೆಗಳಿವೆ ಎನ್ನಲಾಗಿದೆ.

Comments are closed.