ಕರಾವಳಿ

ಬೈಂದೂರು ಹೇನಬೇರಿನಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರು ಹಾಗೂ ಮೃತದೇಹ ಪತ್ತೆ, ಮುಂದುವರಿದ ತನಿಖೆ

Pinterest LinkedIn Tumblr

(ವರದಿ- ಯೋಗೀಶ್ ಕುಂಭಾಸಿ)

ಕುಂದಾಪುರ: ಕಾರೊಂದು ಸುಟ್ಟು ಕರಕಲಾದ ಸ್ಥೀತಿಯಲ್ಲಿ ಪತ್ತೆಯಾಗಿದ್ದು ಅದರೊಳಕ್ಕೆ ಗುತುತು ಸಿಕ್ಕದಂತಹ ಸ್ಥಿತಿಯಲ್ಲಿ ಶವ ಕೂಡ ಪತ್ತೆಯಾದ ಘಟನೆ ಬೈಂದೂರು ತಾಲೂಕಿನ ಹೇನಬೇರು ಎಂಬಲ್ಲಿ ನಡೆದಿದೆ.

ಸುಟ್ಟು ಕರಕಲಾದ ಕಾರಣ ವ್ಯಕ್ತಿ ಗುರುತು ಪತ್ತೆಯಾಗಿಲ್ಲ. ಪೋರ್ಡ್ ಕಂಪೆನಿಯ ಐಕಾನ್ ಕಾರು ಎನ್ನಲಾಗಿದ್ದು ಚಾಸ್ಸಿಸ್ ಹಾಗೂ ಇಂಜಿನ್ ನಂಬರ್ ಕೂಡ ಸುಟ್ಟು ಹೋದ ಕಾರಣ ಕಾರಿನ ಮಾಲಕರ ಪತ್ತೆ ಕೂಡ ಕಷ್ಟ ಸಾಧ್ಯವಾಗಿದೆ.

ತಡರಾತ್ರಿ ಘಟನೆ ನಡೆದಿರುವ ಸಾಧ್ಯತೆಯಿದ್ದು ಕೊಲೆಯೋ ಅಥವಾ ಆತ್ಮಹತ್ಯೆಯೋ ಇನ್ನಷ್ಟೇ ತಿಳಿದುಬರಬೇಕಿದೆ. ಸ್ಥಳಕ್ಕೆ ಫೋರೆನ್ಸಿಕ್ ತಜ್ಞರು ಆಗಮಿಸಿದ ಬಳಿಕವಷ್ಟೇ ಹೆಚ್ಚಿನ ಮಾಹಿತಿ ಲಭಿಸಲಿದೆ.

ಬೈಂದೂರು ಸರ್ಕಲ್ ಇನ್ಸ್‌ಪೆಕ್ಟರ್ ಸಂತೋಷ್ ಕಾಯ್ಕಿಣಿ, ಪಿಎಸ್ಐ ಹಾಗೂ ಸಿಬ್ಬಂದಿಗಳು ಭೇಟಿ ನೀಡಿದ್ದಾರೆ.

Comments are closed.