ಉಡುಪಿ: ಆಟವಾಡಲೆಂದು ತೆರಳಿದ್ದ ಬಾಲಕ ನೀರಿನ ಹೊಂಡಕ್ಕೆ ಬಿದ್ದು ಸಾವನ್ನಪ್ಪಿದ ದುರ್ಘಟನೆ ಬ್ರಹ್ಮಾವರದ ಬಳಿ ಬುಧವಾರ ನಡೆದಿದೆ.
ಮೃತ ಬಾಲಕನನ್ನು ನೋರ್ಮನ್ ಮತ್ತು ಸಿಲ್ವಿಯ ಎಂಬವರ 5 ವರ್ಷದ ಪುತ್ರ ಲಾರೆನ್ ಲೂವಿಸ್ ಎಂದು ಗುರುತಿಸಲಾಗಿದೆ.
ಬ್ರಹ್ಮಾವರ ತಾಲೂಕು ಉಪ್ಪೂರು ತೆಂಕಬೆಟ್ಟು ಬಳಿ ಈ ಘಟನೆ ನಡೆದಿದ್ದು, ಕುವೈಟ್ ನಲ್ಲಿ ವಾಸವಾಗಿದ್ದ ಈ ಕುಟುಂಬ ಇತ್ತೀಚೆಗಷ್ಟೇ ಊರಿಗೆ ಮರಳಿದ್ದರು.
ಮನೆಯ ಪಕ್ಕ ಆಟವಾಡುತ್ತಿದ್ದಾಗ ನೀರಿನ ಹೊಂಡಕ್ಕೆ ಬಿದ್ದು ಮಗು ದಾರುಣವಾಗಿ ಸಾವನ್ನಪ್ಪಿದೆ ಎನ್ನಲಾಗಿದೆ.
ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
Comments are closed.