ಕರಾವಳಿ

ಆಲೂರಿನಲ್ಲಿ ನೀರಿನ ಹೊಂಡಕ್ಕೆ ಬಿದ್ದು ಬಾಗಲಕೋಟೆ ಮೂಲದ ವ್ಯಕ್ತಿ ಮೃತ್ಯು

Pinterest LinkedIn Tumblr

ಕುಂದಾಪುರ: ನೀರಿನ ಹೊಂಡಕ್ಕೆ ಆಕಸ್ಮಿಕವಾಗಿ ಜಾರಿಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಕುಂದಾಪುರ ತಾಲೂಕು ಆಲೂರು ಗ್ರಾಮದ ಕಾಳಿಕಾಂಬ ನಗರದಲ್ಲಿ ಜುಲೈ 14ರಂದು ಸಂಜೆ ನಡೆದಿದೆ.

ಮೃತರನ್ನು ಮೂಲತ ಬಾಗಲಕೋಟೆ ತಾಲೂಕಿನ ಹಂಡರಗಲ್‌ಗ್ರಾಮದ 38 ವರ್ಷ ಪ್ರಾಯದ ಸಂಗಪ್ಪ ಎಂದು ಗುರುತಿಸಲಾಗಿದೆ.

ಇವರು ಸುಮಾರು 1 ತಿಂಗಳಿನಿಂದ ಆಲೂರು ಗ್ರಾಮದ ಸುಭಾಸ್ ಶೆಟ್ಟಿ ಅವರ ಮನೆಯಲ್ಲಿ ಕೃಷಿ ಕೆಲಸ ಮಾಡಿಕೊಂಡಿದ್ದು, ಅಲ್ಲೆ ಶೆಡ್‌ನಲ್ಲಿ ವಾಸವಾಗಿದ್ದರು. ನಿನ್ನೆ ಕೆಲಸ ಮುಗಿಸಿಕೊಂಡು ಕೃಷಿ ನೀರಿನ ಹೊಂಡಕ್ಕೆ ಕೈ ಕಾಲು ತೊಳೆಯಲು ಹೋಗಿದ್ದರು. ಈ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.