ಕರಾವಳಿ

ಸರ್ಕಾರಿ ವಾಹನದ ಮಿರರ್ ಪುಡಿ ಮಾಡಿ, ಅಧಿಕಾರಿಗಳಿಗೆ ಅವ್ಯಾಚ್ಯ ಶಬ್ದಗಳಿಂದ ನಿಂದನೆ: ಯುವಕ ಅರೆಸ್ಟ್

Pinterest LinkedIn Tumblr

ಬಂಟ್ವಾಳ: ಕ್ಷುಲ್ಲಕ ಕಾರಣಕ್ಕಾಗಿ ದ್ವಿಚಕ್ರ ವಾಹನ ಸವಾರನೋರ್ವ ಸರ್ಕಾರಿ ವಾಹನವೊಂದರ ಮಿರರ್ ಪುಡಿ ಮಾಡಿದ್ದಲ್ಲದೆ, ಕಾರಿನಲ್ಲಿದ್ದ ಸರ್ಕಾರಿ ಅಧಿಕಾರಿಗಳಿಗೆ ಹಲ್ಲೆಗೆ ಮುಂದಾಗಿ ಅವ್ಯಾಚ ಶಬ್ದಗಳಿಂದ ನಿಂದಿಸಿರುವ ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ.

ಕೊಣೆಮಾರ್ ನಿವಾಸಿ ಸಂಶುದ್ದೀನ್ ಬಂಧಿತ ಆರೋಪಿ. ಬಂಟ್ವಾಳ ಗ್ರಾಮಾಂತರ ಪೋಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಮಂಗಳೂರು ಜಿಲ್ಲಾ ಪಂಚಾಯತ್ ಕಚೇರಿಯ ವಾಹನವೊಂದರ ಚಾಲಕ ದೇವದಾಸ್ ಎಂಬವರು ಜಿಲ್ಲಾ ಪಂಚಾಯತ್ ಇಲಾಖೆಯ ಮೂವರು ಅಧಿಕಾರಗಳನ್ನು ಮಂಗಳೂರಿನಿಂದ ಪುತ್ತೂರಿಗೆ ಮುಖ್ಯವಾದ ಸಭೆಗೆ ಕಾರಿನಲ್ಲಿ ಕರೆದುಕೊಂಡು ಹೋಗುತ್ತಿದ್ದರು. ಈ ವೇಳೆ ತುಂಬೆ ರಾಷ್ಟ್ರೀಯ ಹೆದ್ದಾರಿ ಎದುರಿನಲ್ಲಿ ಹೋಗುತ್ತಿದ್ದ ವಾಹನ ಸವಾರನೋರ್ವ ಬ್ರೇಕ್ ಹಾಕಿದ್ದಾರೆ ಎಂಬ ಕಾರಣಕ್ಕೆ ಜಿಲ್ಲಾ ಪಂಚಾಯತ್ ಇಲಾಖೆಯ ವಾಹನ ಚಾಲಕ ಜಗದೀಶ್ ಅವರು ಕೂಡ ಬ್ರೇಕ್ ಹಾಕಿದ್ದಾರೆ.

ದ್ವಿಚಕ್ರ ವಾಹನದಲ್ಲಿ ವೇಗವಾಗಿ ಬರುತ್ತಿದ್ದ ಯುವಕ, ಕಾರಿನ ಹಿಂಬದಿಯಲ್ಲಿದ್ದು ಆತ ಕೂಡ ಬ್ರೇಕ್ ಹಾಕಿದಾಗ ನಿಯಂತ್ರಣ ಕಳೆದುಕೊಂಡು ಸ್ಕಿಡ್ ಆಗಿ ರಸ್ತೆಗೆ ಬಿದ್ದಿದ್ದಾನೆ ಎಂದು ಹೇಳಲಾಗಿದೆ. ಈ ಕಾರಣಕ್ಕಾಗಿ ಆತ ಕಾರಿಗೆ ದ್ವಿಚಕ್ರವಾಹನವನ್ನು ಅಡ್ಡ ಇಟ್ಟು, ತಡೆಯೊಡ್ಡಿ ಬಳಿಕ ಕಾರಿನ ಮಿರರ್ ಅನ್ನು ಪುಡಿಮಾಡಿ, ಚಾಲಕ ಸಹಿತ ಕಾರಿನಲ್ಲಿದ್ದ ಅಧಿಕಾರಿಗಳಿಗೆ ಅವ್ಯಾಚ್ಚ ಶಬ್ದಗಳಿಂದ ನಿಂದಿಸಿದ್ದಾನೆ.

ಬಂಟ್ವಾಳ ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಜಿಲ್ಲಾ ಪಂಚಾಯತ್ ಇಲಾಖೆಯ ವಾಹನ ಚಾಲಕ ಜಗದೀಶ್ ದೂರು ನೀಡಿರುವ ಹಿನ್ನೆಲೆ ಪ್ರಕರಣ ದಾಖಲಾಗಿತ್ತು.

Comments are closed.