ಉಡುಪಿ: ನಗರದ ನ್ಯಾಯಾಲಯದ ಹಿಂಬದಿಯ ವಕೀಲೆಯೋರ್ವರ ಮನೆಗೆ ನುಗ್ಗಿದ ಕಳ್ಳರು 25 ಲಕ್ಷ ಮೌಲ್ಯದ ಚಿನ್ನಾಭರಣ, ಬಟ್ಟೆ ಬರೆಗಳನ್ನು ಹಾಗೂ ನಗದನ್ನು ಕದ್ದು ಪರಾರಿಯಾಗಿದ್ದಾರೆ.
ವಾಣಿ ವಿ ರಾವ್ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದ್ದು, ನಿನ್ನೆ ಹಾಡುಹಗಲೇ ಮನೆಗೆ ನುಗ್ಗಿದ ಕಳ್ಳರು ಕೋಣೆಯಲ್ಲಿದ್ದ ಕಪಾಟಿನ ಲಾಕರ್ ನಲ್ಲಿ ಇರಿಸಿದ್ದ ಪರ್ಸ್ ನಲ್ಲಿದ್ದ 45,000 ರೂ. ನಗದು ಮತ್ತು ವ್ಯಾನಿಟಿ ಬ್ಯಾಗ್ನಲ್ಲಿರಿಸಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ಬಟ್ಟೆ ಬರೆಗಳನ್ನು ಕದ್ದು ಪರಾರಿಯಾಗಿದ್ದಾರೆ.
ಕಳವಾದ ಸೊತ್ತುಗಳ ಒಟ್ಟು ಮೌಲ್ಯ ರೂ. 25,00,000 ಆಗಿರುವುದಾಗಿ ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Comments are closed.