ಕರಾವಳಿ

ಗಂಗೊಳ್ಳಿಯಲ್ಲಿ 100 ಕೋಟಿ ವೆಚ್ಚದಲ್ಲಿ ಕೋಸ್ಟಲ್ ಬರ್ತ್ ನಿರ್ಮಾಣಕ್ಕೆ ಕೇಂದ್ರ ಅನುಮೋದನೆ: ಸಂಸದ ಬಿ.ವೈ ರಾಘವೇಂದ್ರ

Pinterest LinkedIn Tumblr

ಕುಂದಾಪುರ: ಶಿವಮೊಗ್ಗ ಲೋಕಸಭಾ ಕ್ಷೇತ್ರ ಬೈಂದೂರು ವಿಧಾನಸಭಾ ಕ್ಷೇತ್ರದ ಗಂಗೊಳ್ಳಿಯಲ್ಲಿ ಸುಮಾರು 100 ಕೋಟಿ ವೆಚ್ಚದಲ್ಲಿ ಕೋಸ್ಟಲ್ ಬರ್ತ್ ನಿರ್ಮಿಸಲು ಕೇಂದ್ರ ಬಂದರು, ಹಡಗು ಮತ್ತು ಜಲಮಾರ್ಗ ಸಚಿವರಾದ ಸರ್ಬಾನಂದ ಸೋನೋವಾಲ ಅವರು ಸಮ್ಮತಿಸಿದ್ದಾರೆ. ಕೋಸ್ಟಲ್ ಬರ್ತ್ ನಿರ್ಮಾಣದಿಂದ ಮತ್ಸೋದ್ಯಮಕ್ಕೆ ಪೂರಕ ವಾತಾವರಣ ಸಿಗಲಿದೆ. ಸಾಗರಮಾಲ ಯೋಜನೆಯಲ್ಲಿ ಬಂದರು ಸಂಪರ್ಕ ಕೂಡ ಆಗಲಿದ್ದು, ಮುಂದಿನ ದಿನಗಳಲ್ಲಿ ಗಂಗೊಳ್ಳಿ ಒಂದು ಅತ್ಯುತ್ತಮ ವಾಣಿಜ್ಯ ಕೇಂದ್ರವಾಗಿ ಹೊರಹೊಮ್ಮಲಿದೆ ಎಂದು ಸಂಸದ ಬಿ. ವೈ. ರಾಘವೇಂದ್ರ ತಿಳಿಸಿದ್ದಾರೆ.

ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಸಣ್ಣ ಕೈಗಾರಿಕೋದ್ಯಮಗಳನ್ನು ಪ್ರೋತ್ಸಾಹಿಸಲು ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ದಿ ನಿಗಮ ನಿಯಮಿತ ಇವರ ವತಿಯಿಂದ ಕೈಗಾರಿಕಾ ವಸಾಹತು ನಿರ್ಮಿಸಲು ಉಡುಪಿ ಜಿಲ್ಲಾಡಳಿತಕ್ಕೆ ಸ್ಥಳ ಗುರುತು ಮಾಡಲು ವಿನಂತಿಸಲಾಗಿದ್ದು ಅದರಂತೆ ಸುಮಾರು 19 ಎಕ್ರೆ ಸ್ಥಳವನ್ನು ಗುರುತಿಸಿ ಕೈಗಾರಿಕಾ ವಸಾಹತು ನಿರ್ಮಿಸಲು ಕ್ರಮಕೈಗೊಳ್ಳಲಾಗಿದೆ.

ಈ ಎರಡು ಮಹತ್ವದ ಯೋಜನೆಗಳಿಂದ ಬೈಂದೂರು ವಿಧಾನ ಸಭಾ ಕ್ಷೇತ್ರದಲ್ಲಿ ಸಾವಿರಾರು ಉದ್ಯೋಗ ಸೃಷ್ಠಿಯಾಗಲಿದೆ. ಸದರಿ ಯೋಜನೆಗಳಿಗೆ ಸಹಕರಿಸಿದ ಕೇಂದ್ರ ಹಾಗೂ ರಾಜ್ಯದ ಡಬಲ್ ಇಂಜಿನ್ ಸರಕಾರಕ್ಕೆ ಸಂಸದ ಬಿ. ವೈ. ರಾಘವೇಂದ್ರ ಕೃತಜ್ಞತೆ ಸಲ್ಲಿಸಿದ್ದಾರೆ.

Comments are closed.