ಬೆಂಗಳೂರು: ‘ವಿಕ್ರಾಂತ್ ರೋಣ’ ಸಿನಿಮಾದ ಪ್ರೀ ರಿಲೀಸ್ ಕಾರ್ಯಕ್ರಮ ಬೆಂಗಳೂರಿನ ರಾಜಾಜಿನಗರದಲ್ಲಿರುವ ಲುಲು ಮಾಲ್ನಲ್ಲಿ ಇಂದು (ಜುಲೈ 26) ನಡೆಯಿತು.
ಕಿಚ್ಚ ಸುದೀಪ್ ಅಭಿನಯದ, ಅನೂಪ್ ಭಂಡಾರಿ ನಿರ್ದೇಶನದ ಹೈವೋಲ್ಟೇಜ್ ವಿಕ್ರಾಂತ್ ರೋಣ ಸಿನಿಮಾ ಜುಲೈ 28 ರಂದು (ನಾಳೆ) ವಿಶ್ವದಾದ್ಯಂತ ತೆರೆ ಕಾಣುತ್ತಿದೆ. ಬೆಂಗಳೂರಿನ ಲುಲು ಮಾಲ್ನಲ್ಲಿ ಆಯೋಜಿಸಿರುವ ಪ್ರೀ ರಿಲೀಸ್ ಕಾರ್ಯಕ್ರಮದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದಾರೆ. ವಿಕ್ರಾಂತ್ ರೋಣ ಎಂದರೆ ಕೇವಲ ಒಂದು ಮಾತಲ್ಲಿ ವಿಕ್ಟರಿ ರೋಣ ಎಂದ ಅವರು, ಇದು ಪ್ಯಾನ್ ಇಂಡಿಯಾ ಅಲ್ಲ ಪ್ಯಾನ್ ವರ್ಲ್ಡ್ ಸಿನಿಮಾ ಎಂದು ಬಣ್ಣಿಸಿದ್ದಾರೆ.
ಈ ಕಾರ್ಯಕ್ರಮದಲ್ಲಿ ಸುದೀಪ್ ಅವರನ್ನು ನೋಡಲು ಜನ ಸಾಗರವೇ ನೆರೆದಿತ್ತು. ವೇದಿಕೆ ಮೇಲೆ ಸುದೀಪ್ ಅವರು ಮಗಳಿಗಾಗಿ ಹಾಡನ್ನು ಹಾಡಿದರು. ಅದ್ದೂರಿ ಕಾರ್ಯಕ್ರಮದಲ್ಲಿ ಚಿತ್ರತಂಡದವರಿದ್ದರು.
Comments are closed.