ಕರ್ನಾಟಕ

‘ವಿಕ್ರಾಂತ್​ ರೋಣ’ ಪ್ರೀ-ರಿಲೀಸ್ ಇವೆಂಟ್​ನಲ್ಲಿ ಉಪೇಂದ್ರ ಮುಖ್ಯ ಅತಿಥಿ..!

Pinterest LinkedIn Tumblr

ಬೆಂಗಳೂರು: ‘ವಿಕ್ರಾಂತ್​ ರೋಣ’ ಸಿನಿಮಾದ ಪ್ರೀ ರಿಲೀಸ್ ಕಾರ್ಯಕ್ರಮ ಬೆಂಗಳೂರಿನ ರಾಜಾಜಿನಗರದಲ್ಲಿರುವ ಲುಲು ಮಾಲ್​ನಲ್ಲಿ ಇಂದು (ಜುಲೈ 26) ನಡೆಯಿತು.

ಕಿಚ್ಚ ಸುದೀಪ್ ಅಭಿನಯದ, ಅನೂಪ್ ಭಂಡಾರಿ ನಿರ್ದೇಶನದ ಹೈವೋಲ್ಟೇಜ್ ವಿಕ್ರಾಂತ್ ರೋಣ ಸಿನಿಮಾ ಜುಲೈ 28 ರಂದು (ನಾಳೆ) ವಿಶ್ವದಾದ್ಯಂತ ತೆರೆ ಕಾಣುತ್ತಿದೆ. ಬೆಂಗಳೂರಿನ ಲುಲು ಮಾಲ್​​ನಲ್ಲಿ ಆಯೋಜಿಸಿರುವ ಪ್ರೀ ರಿಲೀಸ್ ಕಾರ್ಯಕ್ರಮದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದಾರೆ. ವಿಕ್ರಾಂತ್ ರೋಣ ಎಂದರೆ ಕೇವಲ ಒಂದು ಮಾತಲ್ಲಿ ವಿಕ್ಟರಿ ರೋಣ ಎಂದ ಅವರು, ಇದು ಪ್ಯಾನ್ ಇಂಡಿಯಾ ಅಲ್ಲ ಪ್ಯಾನ್ ವರ್ಲ್ಡ್ ಸಿನಿಮಾ ಎಂದು ಬಣ್ಣಿಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ಸುದೀಪ್ ಅವರನ್ನು ನೋಡಲು ಜನ ಸಾಗರವೇ ನೆರೆದಿತ್ತು. ವೇದಿಕೆ ಮೇಲೆ ಸುದೀಪ್ ಅವರು ಮಗಳಿಗಾಗಿ ಹಾಡನ್ನು ಹಾಡಿದರು. ಅದ್ದೂರಿ ಕಾರ್ಯಕ್ರಮದಲ್ಲಿ ಚಿತ್ರತಂಡದವರಿದ್ದರು.

Comments are closed.