ಕರಾವಳಿ

ರಾಜ್ಯಸಭೆ ನೂತನ ಸದಸ್ಯರಾದ ವೀರೇಂದ್ರ ಹೆಗ್ಗಡೆಯವರಿಗೆ ಛಾಯಾಗ್ರಾಹಕ ಸಂಘದಿಂದ ಗೌರವ

Pinterest LinkedIn Tumblr

ಕುಂದಾಪುರ: ರಾಜ್ಯಸಭೆಯ ನೂತನ ಸದಸ್ಯರಾಗಿ ಆಯ್ಕೆಯಾದ ಧರ್ಮಸ್ಥಳದ ಧರ್ಮಧಿಕಾರಿ ವೀರೇಂದ್ರ ಹೆಗ್ಗಡೆಯವರನ್ನು ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಕುಂದಾಪುರ, ಬೈಂದೂರು ವಲಯದ ವತಿಯಿಂದ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಛಾಯಾಗ್ರಾಹಕರನ್ನು ಉದ್ದೇಶಿಸಿ ಮಾತನಾಡಿದ ವೀರೇಂದ್ರ ಹೆಗ್ಡೆಯವರು ಆಧುನಿಕ ತಂತ್ರಜ್ಞಾನದಿಂದ ಛಾಯಾಗ್ರಾಹಕರು ಸವಾಲಿಗೊಳಗಾಗಿದ್ದು ಆ ಸವಾಲನ್ನು ಮೀರಿ ತಂತ್ರಜ್ಞಾನವನ್ನು ಮೈಗೂಡಿಸಿಕೊಳ್ಳುವ ಮೂಲಕ ಸಮಾಜಕ್ಕೆ ಉತ್ತಮ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಎಲ್ಲಾ ಛಾಯಾಗ್ರಾಹಕರಿಗೂ ಭಗವಂತನ ಅನುಗ್ರಹ ಸದಾಕಾಲವೂ ಇರಲಿ ಎಂದರು.

ಈ ಸಂದರ್ಭ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಜಿಲ್ಲಾಧ್ಯಕ್ಷ ಆನಂದ ಬಂಟ್ವಾಳ್,ಕುಂದಾಪುರ-ಬೈಂದೂರು ವಲಯ ಅಧ್ಯಕ್ಷ‌ ದೊಟ್ಟಯ್ಯ ಪೂಜಾರಿ,ಸಲಹಾ ಸಮಿತಿ ಅಧ್ಯಕ್ಷ ನಾಗರಾಜ್ ರಾಯಪ್ಪನಮಠ, ಪ್ರಧಾನ ಕಾರ್ಯದರ್ಶಿ ಸುರೇಶ್ ಜಮದಗ್ನಿ, ಅಮೃತ್ ಬೀಜಾಡಿ, ದಿನೇಶ್ ಮೊದಲಾದವರು ಉಪಸ್ಥಿತರಿದ್ದರು.

Comments are closed.