ಉಡುಪಿ: ಫಾಝಿಲ್ ಕೊಲೆ ಪ್ರಕರಣದ ಆರೋಪಿಗಳನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ಬೈಂದೂರಿನ ವ್ಯಕ್ತಿಯೊಬ್ಬನ ಮೇಲೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಲಕ್ಷ್ಮೀಕಾಂತ್ ಬೈಂದೂರು’ ಎನ್ನುವ ಪ್ರೊಫೈಲ್ ಹೊಂದಿರುವ ವ್ಯಕ್ತಿ ಪ್ರಚೋದನಕಾರಿ ಪೋಸ್ಟ್ ಮಾಡಿದ ಆರೋಪಿ.
ಈತ ಫೇಸ್ಬುಕ್ ಖಾತೆಯಲ್ಲಿ ಫಾಝಿಲ್ ಹತ್ಯೆ ಪ್ರಕರಣದ ಆರೋಪಿಗಳನ್ನು ಹೀರೋ ಎಂದು ಬಿಂಬಿಸಿ ಪ್ರಚೋದನಕಾರಿ ಶೀರ್ಷಿಕೆ ನೀಡಿ ಪೋಸ್ಟ್ ಮಾಡಿದ್ದ.
ಈ ಹಿನ್ನೆಲೆ ಸುಮೋಟೋ (ಸ್ವಯಂಪ್ರೇರಿತ) ಅಡಿ ಲಕ್ಷ್ಮೀಕಾಂತ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
Comments are closed.