ಕರಾವಳಿ

ಬೈಂದೂರಿನ ಶಿರೂರು ಸಮೀಪ ರೈಲು ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ಮೃತ್ಯು

Pinterest LinkedIn Tumblr

ಕುಂದಾಪುರ: ರೈಲು ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ಮೃತಪಟ್ಟ ಘಟನೆ ಬೈಂದೂರು ತಾಲೂಕಿನ ಶಿರೂರು ಗ್ರಾಮದ ನಿರೋಡಿ ಎಂಬಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.

ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಸಂಪತ್ ಪೂಜಾರಿ (17) ಮೃತಪಟ್ಟ ಬಾಲಕ.

ಈತ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ಸಕ್ರೀಯ. ಅಲ್ಲದೆ ಕ್ರೀಡೆಯಲ್ಲೂ ಕೂಡ ಪ್ರತಿಭಾನ್ವಿತನಾಗಿದ್ದು ಕಾಲೇಜಿನಲ್ಲಿ ಉತ್ತಮ ವಿದ್ಯಾರ್ಥಿಯಾಗಿದ್ದಾನೆ.

ಘಟನಾ ಸ್ಥಳಕ್ಕೆ ರೈಲ್ವೆ ಅಧಿಕಾರಿಗಳು ಹಾಗೂ ಬೈಂದೂರು ಪೊಲೀಸರು ಭೇಟಿ ನೀಡಿದ್ದಾರೆ.

Comments are closed.