ಕರಾವಳಿ

ದೀಪೋತ್ಸವದ ಕಟ್ಟೆ ಪೂಜೆ ಸಿದ್ಧತೆಗಾಗಿ ಮರದ ಗೆಲ್ಲು ಕಡಿಯುವಾಗ ವಿದ್ಯುತ್ ಪ್ರವಹಿಸಿ ಯುವಕ ಮೃತ್ಯು

Pinterest LinkedIn Tumblr

ಕುಂದಾಪುರ: ಮರದ ಗೆಲ್ಲು ಕಡಿಯುವಾಗ ವಿದ್ಯುತ್ ಪ್ರವಹಿಸಿ ಯುವಕನೊಬ್ಬ ಮೃತಪಟ್ಟ ಘಟನೆ ಗುಜ್ಜಾಡಿ ಗ್ರಾಮದ ನಾಯಕವಾಡಿ ಚೆಕ್‌ಪೋಸ್ಟ್‌ ಬಳಿ ನಡೆದಿದೆ.

ಗುಜ್ಜಾಡಿ ಗ್ರಾಮದ ನಿವಾಸಿ ಸುಜಯ (20) ಮೃತ ಯುವಕ.

ಸಂಗಮೇಶ್ವರ ದೇವಸ್ಥಾನದ ಕಾರ್ತಿಕ ದೀಪೋತ್ಸವದ ಕಟ್ಟೆಪೂಜೆಯ ಸಿದ್ದತೆ ಮಾಡುತ್ತಾ ಮಾವಿನ ತೋರಣ ಕಟ್ಟಲು ಕಟ್ಟೆಯ ಬಳಿ ಇರುವ ಮಾವಿನ ಮರದ ಕೊಂಬೆಯನ್ನು ಕಡಿಯಲು ಮರ ಹತ್ತಿ, ಮರದ ಕೊಬೆಯನ್ನು ಕಡಿಯುವಾಗ, ಮರದ ಕೊಂಬೆಯು ಸಮೀಪದಲ್ಲಿ ಹಾದು ಹೋದ ವಿದ್ಯುತ್‌ ತಂತಿಯ ಮೇಲೆ ಬಿದ್ದಿದ್ದರಿಂದ ವಿದ್ಯುತ್ ಪ್ರವಹಿಸಿ ಸುಜಯ್‌ರವರಿಗೆ ತಗುಲಿದ್ದು ತಕ್ಷಣ ಅವರನ್ನು ಸ್ಥಳೀಯರ ಸಹಕಾರದಲ್ಲಿ ಅಂಬುಲೆನ್ಸ್ ಮೂಲಕ ಕುಂದಾಪುರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಯುವಕನನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಈ ಬಗ್ಗೆ ಗಂಗೊಳ್ಳಿ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Comments are closed.