ಕರಾವಳಿ

16 ಬಾರಿ ವಾರೆಂಟ್..2 ವರ್ಷದಿಂದ ನ್ಯಾಯಾಲಯಕ್ಕೆ ಗೈರು; ಪೋಕ್ಸೋ ಪ್ರಕರಣದ ಆರೋಪಿ ಉತ್ತರಾಖಂಡದಲ್ಲಿ ಬಂಧನ

Pinterest LinkedIn Tumblr

ಉಡುಪಿ: ಏಳು ವರ್ಷದ ಹಿಂದಿನ ಪೋಕ್ಸೋ ಪ್ರಕರಣದ ಆರೋಪಿಯನ್ನು ಭಾರತ-ನೇಪಾಳ ಗಡಿಭಾಗದಲ್ಲಿ ಬಂಧಿಸಲಾಗಿದೆ. ನೇಪಾಳದ ಜಿತೇಂದ್ರ ಶಾರ್ಕಿ(26) ಬಂಧಿತ ಆರೋಪಿ.

ಈತ 2 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಸುಮಾರು 16 ಬಾರಿ ವಾರೆಂಟ್ ಹಾಗೂ 3 ಬಾರಿ ಅಟ್ಯಾಚ್ ಮೆಂಟ್ ವಾರೆಂಟ್ ಹೊರಡಿಸಲಾಗಿತ್ತು.

ಈತನ ಪತ್ತೆಗಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚೀಂದ್ರ ಅವರ ಮಾರ್ಗದರ್ಶನದಲ್ಲಿ ವಿಶೇಷ ತಂಡವನ್ನು ರಚಿಸಿದ್ದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಲಿಂಗಪ್ಪ, ತಂಡದ ಸದಸ್ಯರಾದ ಉಡುಪಿ ಡಿವೈಎಸ್‌ಪಿ ದಿನಕರ ಕೆ.ಪಿ., ಮಣಿಪಾಲ ಪೊಲೀಸ್ ಠಾಣೆಯ ನಿರೀಕ್ಷಕ ದೇವರಾಜ ಟಿ.ವಿ. ನಿರ್ದೇಶನದಂತೆ ಪಿಎಸ್‌ಐ ಅಬ್ದುಲ್ ಖಾದರ್, ಪಿಎಸ್‌ಐ ನಿಧಿ ಬಿ.ಎನ್., ಎಚ್‌ಸಿ ಥಾಮ್ಸನ್, ಸಿಬಂದಿ ದಿನೇಶ್ ಅವರ ಸಹಕಾರದೊಂದಿಗೆ ಸತತ ಒಂದು ವಾರಗಳ ಕಾಲ ಭಾರತ-ನೇಪಾಳ ಗಡಿಯಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಉತ್ತರಾಖಂಡ ರಾಜ್ಯದ ಬನ್ ಬಸಾ ಪೊಲೀಸ್ ಠಾಣೆಯ ವ್ಯಾಪ್ತಿಯ ಗಡಿಕೋಟ್‌ನಲ್ಲಿ ವಶಕ್ಕೆ ಪಡೆಯಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Comments are closed.