ಕರಾವಳಿ

ಯುವ ಮೆರಿಡಿಯನ್ ಆಡಳಿತ ನಿರ್ದೇಶಕರಾದ ಉದಯ್ ಕುಮಾರ್ ಶೆಟ್ಟಿ, ವಿನಯ್ ಕುಮಾರ್ ಶೆಟ್ಟಿ ಅವರಿಗೆ ಮಾತೃ ವಿಯೋಗ

Pinterest LinkedIn Tumblr

ಕುಂದಾಪುರ: ಕುಂದಾಪುರ ತಾಲೂಕು ಯುವ ಬಂಟರ ಸಂಘದ ಗೌರವಾಧ್ಯಕ್ಷರು, ಕೋಟೇಶ್ವರ ಸಮೀಪದ ಯುವ ಮೆರಿಡಿಯನ್ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕರಾದ ಬಿ. ಉದಯ್ ಕುಮಾರ್ ಶೆಟ್ಟಿ ಹಾಗೂ ಬಿ. ವಿನಯ್ ಕುಮಾರ್ ಶೆಟ್ಟಿ ಅವರ ಮಾತೃಶ್ರೀಯವರಾದ ಶಿರೂರು ಆರ್ಮಕ್ಕಿ ಶ್ರೀಮತಿ ಪ್ರಪುಲ್ಲ ವಿ. ಶೆಟ್ಟಿಯವರು ಎ.16 ರವಿವಾರ ರಾತ್ರಿ 10.30ಕ್ಕೆ ನಿಧನರಾಗಿದ್ದಾರೆ.

ಮೃತರು ಪತಿ ಹಳನಾಡು ದೊಡ್ಡಮನೆ ನಿವೃತ್ತ ಮುಖ್ಯೋಪಾಧ್ಯಾಯರಾದ ವಿಶ್ವನಾಥ ಶೆಟ್ಟಿ, ಪುತ್ರರು, ಸೊಸೆಯಂದಿರು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.

Comments are closed.