ಬೆಂಗಳೂರು: ಗದಗ ಜಿಲ್ಲೆ ಲಕ್ಷ್ಮೇಶ್ವರದಲ್ಲಿ ಇತ್ತೀಚೆಗೆ ನಡೆದ ಅಮಿತ್ ಶಾ ಅವರ ಸಮಾವೇಶದ ವೇಳೆ ಆಗಮಿಸಿದ ಜನರ ತಂಡವು ತಂಪು ಪಾನೀಯ ವಾಹನದ ಮೇಲೆ ಮುಗಿಬಿದ್ದು, ಅದರಲ್ಲಿದ್ದ ಪಾನೀಯ ಕುಡಿದಿದ್ದರು. ಇದರಿಂದ ಸಮೀರ್ ಹಸನ್ ಸಾಬ್ಗೆ ನಷ್ಟವಾಗಿ ಕಣ್ಣೀರಿಟ್ಟಿದ್ದರು.

ಈ ಸುದ್ದಿ ತಿಳಿದು ಸಂಸದ ಪ್ರತಾಪ್ ಸಿಂಹ ನಷ್ಟ ಅನುಭವಿಸಿದ್ದ ವ್ಯಾಪಾರಿ ಸಮೀರ್ಗೆ ಹಣ ಸಂದಾಯ ಮಾಡಿದ್ದು ಬಡ ವ್ಯಾಪಾರಿ ನೆರವು ಮಾಡಿದ್ದಾರೆ. ಹಣ ಸಂದಾಯ ಮಾಡಿರುವ ಬಗ್ಗೆ ಟ್ವೀಟ್ನಲ್ಲಿ ಸ್ಪಷ್ಟನೆ ನೀಡಿದ್ದು, Sorry Brother ಎಂದು ಟ್ವೀಟ್ ಮಾಡಿದ್ದಾರೆ. ಇವರ ಕಾರ್ಯಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆಗೆ ಕಾರಣವಾಗಿದೆ.
ಸಮೀರ್ ಹಸನ್ ಸಾಬ್ ಗೆ ಹಣ ಕಳುಹಿಸಿದ್ದೇನೆ. Sorry brother. ಧನ್ಯವಾದಗಳು. pic.twitter.com/Ah1IVFmbuf
— Pratap Simha (@mepratap) April 30, 2023
ಲಕ್ಷ್ಮೇಶ್ವರದಲ್ಲಿ ಅಮಿತ್ ಶಾ ಸಮಾವೇಶಕ್ಕೆ ಬದಿದ್ದ ಜನರಿಗೆ ಕಾರ್ಯಕ್ರಮದ ಆಯೋಜಕರು ನೀರಿನ ವ್ಯವಸ್ಥೆ ಮಾಡಿರಲಿಲ್ಲ. ಬಿಸಿಲಿನಿಂದಾಗಿ ಜನರು ನೀರಿಗಾಗಿ ಪರದಾಡುತ್ತಿದ್ದರು. ಅದೇ ಸಂದರ್ಭದಲ್ಲಿ ಸಮೀರ್ ಹಸನ್ ಸಾವ್ ಎನ್ನುವರು ಕೂಲ್ ಡ್ರಿಂಕ್ಸ್ ಇರುವ ವಾಹನ ಸಮಾವೇಶದ ಬಳಿ ವ್ಯಾಪಾರಕ್ಕೆ ತಂದಿದ್ದರು. ಬಿಜೆಪಿಯವರೇ ಕೂಲ್ ಡ್ರಿಂಕ್ಸ್ ತರಿಸಿದ್ದಾರೆ ಎಂದು ಜನ ಸಮೀರ್ ವಾಹನದಲ್ಲಿದ್ದ ಕೂಲ್ ಡ್ರಿಂಕ್ಸ್, ಜ್ಯೂಸ್, ನೀರಿನ ಬಾಟಲ್ ತಗೆದುಕೊಂಡು ಹೋಗಿದ್ದರು. ಇದರಿಂದ ಸುಮಾರು 35 ಸಾವಿರ ರೂಪಾಯಿ ನಷ್ಟವಾಗಿದೆ ಎಂದು ಸಮೀರ್ ಕಣ್ಣೀರಿಟ್ಟಿದ್ದು ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿತ್ತು.
ಇದೀಗ ಮೈಸೂರು ಸಂಸದ ಪ್ರತಾಪ್ ಸಿಂಹ, ವ್ಯಾಪಾರಿ ಸಮೀರ್ ಫೋನ್ ಪೇ ಅಕೌಂಟ್ಗೆ 35 ಸಾವಿರ ರೂಪಾಯಿ ಸಂದಾಯ ಮಾಡಿದ್ದಾರೆ. ಸಂಸದರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.
Comments are closed.