ಕುಂದಾಪುರ: ಖಾಸಗಿ ಬಸ್ಸೊಂದು ಸರಕಾರಿ ಬಸ್ಸಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದ್ದು ಖಾಸಗಿ ಬಸ್ಸಿನ ಚಾಲಕ ಸಹಿತ ಎಂಟು ಮಂದಿ ಪ್ರಯಾಣಿಕರು ಗಾಯಗೊಂಡ ಘಟನೆ ಮೇ.3 ಬುಧವಾರ ಮಧ್ಯಾಹ್ನ ಕುಂದಾಪುರ ತಾಲೂಕಿನ, ತಲ್ಲೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಕುಂದಾಪುರದಿಂದ ಹೆಮ್ಮಾಡಿ ಕಡೆಗೆ ತೆರಳುತ್ತಿದ್ಧ ಖಾಸಗಿ ಬಸ್ಸಿನಲ್ಲಿದ್ದ ರಶ್ಮೀತಾ, ದಿವ್ಯಾ, ಚೈತ್ರ, ಚಂದ್ರವತಿ, ಜ್ಯೋತಿ, ರಕ್ಷೀತಾ, ರಾಧಕೃಷ್ಣ ಗಾಯಾಳುಗಳು.
ಘಟನೆ ವಿವರ: ಖಾಸಗಿ ಬಸ್ಸಿನ ಚಾಲಕ ಮನೋಹರ್ ಎಂಬಾತ ಬಸ್ಸನ್ನು ಅತೀವೇಗ ಹಾಗೂ ನಿರ್ಲಕ್ಷತನದಿಂದ ಚಲಾಯಿಸಿಕೊಂಡು ಬಂದಿದ್ದು ತಲ್ಲೂರು ಬಳಿ ಇಂಡಿಕೇಟರ್ ಹಾಕಿ ತಿರುಗಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ನ ಎಡಬದಿಯ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ರಶ್ಮೀತಾ, ದಿವ್ಯಾ ಹಾಗೂ ಚೈತ್ರ ಗಾಯಗೊಂಡು ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ಖಾಸಗಿ ಬಸ್ ಚಾಲಕ ಮನೋಹರ್ ಹಾಗೂ ಬಸ್ನ ಪ್ರಯಾಣಿಕರಾದ ಚಂದ್ರವತಿ, ಜ್ಯೋತಿ, ರಕ್ಷೀತಾ ಹಾಗೂ ರಾಧಕೃಷ್ಣ ಎಂಬವರು ಗಾಯಗೊಂಡು ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಕುಂದಾಪುರ ಸಂಚಾರಿ ಠಾಣೆ ಪೊಲೀಸ್ ಉಪ ನಿರೀಕ್ಷಕ ನಾಸೀರ್ ಹುಸೇನ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿದ್ದು ಪ್ರಕರಣ ದಾಖಲಾಗಿದೆ.
Comments are closed.