ಬೆಂಗಳೂರು: ಕರ್ನಾಟಕ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು ಬಿಜೆಪಿ 72 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ 119 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು ಜೆಡಿಎಸ್ 26 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಇತರರು ಒಂದು ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಮೂರು ಪಕ್ಷಗಳ ನಡುವಿನ ಭಾರಿ ಹಣಾಹಣಿ, ಅಬ್ಬರದ ಪ್ರಚಾರ, ಪ್ರತಿಷ್ಠೆಯನ್ನೇ ಪಣವಾಗಿಟ್ಟು ನಡೆದ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ 3.67 ಕೋಟಿ ಮತದಾರರು ನೀಡಿರುವ ಜನಾದೇಶ ಇನ್ನು ಕೆಲವೇ ಕ್ಷಣಗಳಲ್ಲಿ ಬಹಿರಂಗವಾಗಲಿದೆ. ಈ ಮೂರು ಪಕ್ಷಗಳ ಜೊತೆಗೇ ಎಎಪಿ, ಬಿಎಸ್ ಪಿ ಮತ್ತು ನಟ ಉಪೇಂದ್ರ ಅವರ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಗಳು ಕೂಡ ತಮ್ಮ ಅದೃಷ್ಟಪರೀಕ್ಷೆಗೆ ನಿಂತಿದ್ದಾರೆ.
ವಿಧಾನಸಭೆಯ 224 ಕ್ಷೇತ್ರಗಳ ಪ್ರತಿನಿಧಿಗಳ ಆಯ್ಕೆಗೆಡ ಎ.10 ಬುಧವಾರ ಮತದಾನ ನಡೆದಿತ್ತು. 5.07 ಕೋಟಿ ಮತದಾರರಲ್ಲಿ 3.67 ಕೋಟಿ ಮಂದಿ ಮತಚಲಾಯಿಸಿದ್ದರು. 2,615 ಅಭ್ಯರ್ಥಿಗಳು ಕಣದಲ್ಲಿದ್ದು, ಇಂದು ಅವರ ಭವಿಷ್ಯ ಹೊರಬೀಳಲಿದೆ.
Comments are closed.