ಕರಾವಳಿ

ನೇಣು ಬಿಗಿದು ಕುಂದಾಪುರದ ಕೆರಾಡಿ ಯುವಕ ಆತ್ಮಹತ್ಯೆಗೆ ಶರಣು

Pinterest LinkedIn Tumblr

ಕುಂದಾಪುರ: ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆರಾಡಿ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಶಶಿಕಾಂತ (25) ಆತ್ಮಹತ್ಯೆ ಮಾಡಿಕೊಂಡ ಯುವಕ.

ಅಮರ ಶೆಟ್ಟಿ ಎಂಬವರು ನಿನ್ನೆ ಸಂಜೆ ಕೆರಾಡಿಯಿಂದ ಚಿತ್ತೂರು ಕಡೆಗೆ ಹೋಗುತ್ತಿರುವಾಗ ಕೆರಾಡಿ ಗ್ರಾಮದ ಚಪ್ಪರಮಕ್ಕಿ ಕೂರ್ಕೊಗೆ ಎಂಬಲ್ಲಿ ನಿರ್ಜನ ಪ್ರದೇಶದ ರಸ್ತೆ ಬದಿಯಲ್ಲಿ ಅವರ ಸ್ನೇಹಿತ ಶಶಿಕಾಂತ ಅವರ ಬೈಕ್ ನಿಂತಿರುವುದು ಗಮನಕ್ಕೆ ಬಂದಿದೆ. ಅವರು ಶಶಿಕಾಂತನ ಮೊಬೈಲ್‌ಗೆ ಕರೆ ಮಾಡಿದ್ದು, ಆತ ಸ್ವೀಕರಿಸದ್ದಿದಾಗ ಇನ್ನುಳಿದ ಸ್ನೇಹಿತರಿಗೆ ಕರೆಮಾಡಿ ವಿಚಾರ ತಿಳಿಸಿ ಎಲ್ಲರೂ ಸೇರಿ ಅಭಯಾರಣ್ಯದಲ್ಲಿ ಹುಡುಕುತ್ತಿರುವಾಗ ಶಶಿಕಾಂತನು ಒಂದು ಚಾಕಟೆ ಮರಕ್ಕೆ ಸುತ್ತಿಕೊಂಡಿರುವ ಕುಮ್ಟಿ ಬೀಳಿಗೆ ಪಾಲ್ಸ್ ನ ಬೀಳನ್ನು ಕಟ್ಟಿಕೊಂಡು ನೇಣಿಗೆ ಶರಣಾಗಿರುವುದು ಬೆಳಕಿಗೆ ಬಂದಿದೆ.

ಈ ಬಗ್ಗೆ ಕೊಲ್ಲೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.