ಕರ್ನಾಟಕ

ಮಾಜಿ ಸಿಎಂ ಬಸವರಾಜ ಬೊಮ್ಮಾಯಿಯವರನ್ನು ಭೇಟಿಯಾದ ಡಿಸಿಎಂ ಡಿಕೆಶಿ: ‘ಬ್ರಾಂಡ್ ಬೆಂಗಳೂರು’ ಬಗ್ಗೆ ಚರ್ಚೆ

Pinterest LinkedIn Tumblr

ಬೆಂಗಳೂರು: ನಗರದ ರೇಸ್​ಕೋರ್ಸ್​ ರಸ್ತೆಯ ನಿವಾಸದಲ್ಲಿ ಶುಕ್ರವಾರ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನ ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾದರು.

ಮನೆಗೆ ಬಂದ ಡಿಕೆ ಶಿವಕುಮಾರ್​ಗೆ ಬೊಮ್ಮಾಯಿಯವರು​ ಹೂ ಗುಚ್ಛ ನೀಡಿ ಸ್ವಾಗತಿಸಿದರು. ಇದಕ್ಕೆ ಪ್ರತಿಯಾಗಿ ಡಿಕೆ ಶಿವಕುಮಾರ್​ ಕೂಡ ಬೊಮ್ಮಾಯಿಯವರಿಗೂ ಶಾಲು ಹೊದಿಸಿ, ಹೂ ಗುಚ್ಛ ನೀಡಿದರು. ಇನ್ನು ಈ ಹಿಂದೆ ಸಿಎಂ ಆಗಿ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಕೆಲಸ ನಿರ್ವಹಿಸಿದ್ದ ಬಸವರಾಜ್ ಬೊಮ್ಮಾಯಿಯುವರಿಂದ ಬ್ರಾಂಡ್ ಬೆಂಗಳೂರು ಸಂಬಂಧ ಸಲಹೆಗಳನ್ನು ಪಡೆದರು ಎನ್ನಲಾಗಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಡಿ.ಕೆ ಶಿವಕುಮಾರ್, “ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರನ್ನು ಇಂದು ಅವರ ನಿವಾಸದಲ್ಲಿ ಭೇಟಿಯಾಗಿ ಅವರ ಆತಿಥ್ಯ ಸ್ವೀಕರಿಸಿದೆ. ಈ ಹಿಂದೆ ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿದ್ದ ಬೊಮ್ಮಾಯಿ ಅವರಿಂದ ಬ್ರಾಂಡ್ ಬೆಂಗಳೂರು ನಿರ್ಮಾಣದ ಉದ್ದೇಶದಿಂದ ಕೆಲವು ಸಲಹೆಗಳನ್ನು ಪಡೆದೆ” ಎಂದಿದ್ದಾರೆ.

Comments are closed.