ಬೈಂದೂರು: ತಿಂಡಿ ತಿನಿಸುಗಳನ್ನು ಸಾಗಿಸುತ್ತಿದ್ದ ಗೂಡ್ಸ್ ರೈಲಿಗೆ ಬೆಂಕಿ ತಗುಲಿ ವಸ್ತುಗಳು ಸುಟ್ಟು ಹೋದ ಘಟನೆ ಬೈಂದೂರು ತಾಲೂಕಿನ ಬಿಜೂರು ರೈಲ್ವೆ ನಿಲ್ದಾಣದಲ್ಲಿ ಅ.10ರಂದು ಮುಂಜಾನೆ ಸಂಭವಿಸಿದೆ.
ಅ.9ರಂದು ಮುಂಬೈ ಕೋಲಾಡ್ ನಿಂದ ಮಂಗಳೂರು ಸುರತ್ಕಲ್ ಕಡೆಗೆ ಲಾರಿಗಳನ್ನು ಹೊತ್ತ ಗೂಡ್ಸ್ ರೈಲು ಮಂಗಳವಾರ ಮುಂಜಾನೆ ಬೈಂದೂರು ತಾಲೂಕಿನ ಬಿಜೂರು ಗ್ರಾಮದ ವ್ಯಾಪ್ತಿಯಲ್ಲಿ ಬರುವ ಬಿಜೂರು ರೈಲ್ವೆ ನಿಲ್ದಾಣದ ಸಮೀಪ ಬರುವಾಗ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ.
ಲಾರಿಯೊಂದರಲ್ಲಿ ಬೆಂಕಿ ಹೊತ್ತಿಕೊಂಡಿರುವುದನ್ನು ನೋಡಿದ ಸಿಬಂದಿ ತಕ್ಷಣ ಗೂಡ್ಸ್ ರೈಲು ನಿಲ್ಲಿಸಿ, ಬೆಂಕಿ ಆರಿಸಲು ಪ್ರಯತ್ನಿಸಿದರು. ಲಾರಿ ಒಳಗಿದ್ದ ತಿಂಡಿ ತಿನಿಸುಗಳು ಭಾಗಶಃ ಸುಟ್ಟು ಹೋಗಿದೆ.
ಬೈಂದೂರು ಅಗ್ನಿ ಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿ ಆರಿಸಿದರು.
Comments are closed.