ಕರಾವಳಿ

ಕೊಲೆಗಾರ‌ ಪ್ರವೀಣನಿಗೂ ಅಯ್ನಾಝ್’ಗೆ 8 ತಿಂಗಳಿಂದ ಗೆಳೆತನ; ಪೊಸೆಸಿವ್ ನೆಸ್ ಕೊಲೆಗೆ ಕಾರಣ..!

Pinterest LinkedIn Tumblr

ಉಡುಪಿ: ಮಲ್ಪೆ‌ ಪೊಲೀಸ್ ಠಾಣೆ ವ್ಯಾಪ್ತಿಯ ನೇಜಾರು ತೃಪ್ತಿ ನಗರದಲ್ಲಿ ನವೆಂಬರ್ 12 ರಂದು ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಎಸ್‌ಪಿ ಡಾ. ಅರುಣ್ ಕೆ ಅವರು ಪತ್ರಿಕಾಗೋಷ್ಠಿ ಪ್ರಕರಣದ ಮಾಹಿತಿ ನೀಡಿದ್ದಾರೆ.

ಆರೋಪಿ ಪ್ರವೀಣ್ ಮತ್ತು ಅಯ್ನಾಝ್ ಗೆ ಎಂಟು ತಿಂಗಳಿನಿಂದ ಪರಿಚಯ, ಗೆಳೆತನವಿತ್ತು. ಪ್ರವೀಣ್ – ಅಯ್ನಾಝ್ ಗೆ ಹಲವಾರು ಸಹಾಯ ಮಾಡದ್ದಾರೆ. ಆದರೆ ಒಂದು ತಿಂಗಳಿಂದ ಸರಿಯಾಗಿ ಮಾತನಾಡುತ್ತಿರಲಿಲ್ಲ. ಹೀಗಾಗಿ ಪ್ರವೀಣ್ ಪೊಸೆಸಿವ್ ನೆಸ್ ನಿಂದ ಕೊಲೆ ಮಾಡಬೇಕೆಂದು ಪೂರ್ವ ಸಿದ್ಧತೆ ಮಾಡಿಕೊಂಡಿದ್ದ ಎಂದು ಮಾಹಿತಿ ನೀಡಿದರು.

ಪ್ರವೀಣ್ ನ.12 ಬೆಳಿಗ್ಗೆ ಅಯ್ನಾಝ್ ಮನೆಗೆ ಬಂದು ಆಕೆ ಮೇಲೆ ಮೊದಲು ಚೂರಿಯಿಂದ ದಾಳಿ ಮಾಡುತ್ತಾನೆ. ಬಳಿಕ ಒಬ್ಬೊಬ್ಬರಾಗಿ ಹಸೀನಾ, ಅಫ್ನಾನ್, ಆಸಿಂ ಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಬಳಿಕ ಬೇರೆ ಬೇರೆ ವಾಹನದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಪರಾರಿಯಾಗಿದ್ದಾನೆ. ಕೈಗೆ ಆದ ಗಾಯಕ್ಕೆ ಚಿಕಿತ್ಸೆ ಪಡೆದು, ಚಾಕು ಮನೆಯಲ್ಲೇ ಇಟ್ಟು ಹೆಂಡತಿ ತವರು ಮನೆಗೆ ಹೋಗಿದ್ದಾನೆ. ಕೈಗೆ ಗಾಯವಾಗಿದೆ ಎಂಬ ಬಗ್ಗೆ ಪತ್ನಿಗೆ ಸುಳ್ಳು ಹೇಳಿ ದಾರಿ ತಪ್ಪಿಸಿದ್ದಾನೆ ಎಂದರು.

ಎಲ್ಲಾ ಆಯಾಮದಲ್ಲಿ ತನಿಖೆ ಮಾಡುತ್ತಿದ್ದೇವೆ. ಪ್ರವೀಣ್ ಗೆ ಯಾವುದೇ ಕ್ರಿಮಿನಲ್ ಹಿನ್ನೆಲೆಯಿಲ್ಲ. 2007 ಪೂನಾ ಪೊಲೀಸ್ ಆಗಿದ್ದ, ಉತ್ತಮ ಸಂಬಳಕ್ಕಾಗಿ ಏರ್ ಇಂಡಿಯಾ ಎಕ್ಸ್ ಪ್ರೆಸ್ ಸೇರಿದ್ದಾನೆ. ಅಮಲು ಪದಾರ್ಥ ಸೇವನೆ ಮಾಡಿದ್ದಾನೋ ಎಂಬ ಬಗ್ಗೆ ಮೆಡಿಕಲ್ ವರದಿ ಬರಲಿದೆ ಎಂದರು.

ಕುಡುಚಿಯಲ್ಲಿ ಆರೋಪಿಗೆ ಆಶ್ರಯ ನೀಡಿದ ವ್ಯಕ್ತಿಯ ವಿಚಾರಣೆ ಮಾಡಿದ್ದೇವೆ. ಹೆಚ್ಚುವರಿ ಮಾಹಿತಿ ಬೇಕಾಗಿದ್ದರೆ ಅವರಿಂದ ಮಾಹಿತಿ ಪಡೆಯುತ್ತೇವೆ. ಆರೋಪಿಗೆ ಹಿರಿಯಡಕ ಕಾರಾಗೃಹದಲ್ಲಿ ಪ್ರತ್ಯೇಕ ಸೆಲ್ ವ್ಯವಸ್ಥೆ ಮಾಡಲಾಗಿದೆ. ಇಬ್ಬರು ಪೊಲೀಸರ ಬಂದೋಬಸ್ತ್ ನಿಯೋಜನೆ ಆಗಿದೆ. ಗಂಭೀರ ಪ್ರಕರಣವಾಗಿರುವ ಕಾರಣ ಎಲ್ಲಾ ಮಾಹಿತಿ ಮಾಧ್ಯಮಕ್ಕೆ ನೀಡಲಾಗುವುದಿಲ್ಲ ಎಂದು ಎಸ್.ಪಿ ಹೇಳಿದರು.

ಅಯ್ನಾಝ್ ಕುಟುಂಬ ಕೊಲೆ ತನಿಖೆಗೆ ಬಹಳ ಸಹಕಾರ ಕೊಟ್ಟಿದ್ದಾರೆ. ನೂರ್ ಮೊಹಮ್ಮದ್ ಕುಟುಂಬ ಬಹಳ ನೋವಲ್ಲಿದ್ದಾರೆ. ವಿಶೇಷ ಪಿ.ಪಿ ನೇಮಕಕ್ಕೆ ನಾವು ಸಹಕಾರ ನೀಡುತ್ತವೆ. ಫಾಸ್ಟ್ ಟ್ರ್ಯಾಕ್ ಕೋರ್ಟ್ ಬಗ್ಗೆ ಕುಟುಂಬ ಮನವಿ ನೀಡಿದೆ ಎಂದರು.ತನಿಖೆಗೆ ಒಟ್ಟು 11 ತಂಡ ರಚನೆ ಮಾಡಿದ್ದೆವು. ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿಗಳು ಕೆಲಸ ಮಾಡಿದ್ದಾರೆ. ಎಲ್ಲಾ ಕಡೆಯಿಂದ ಮಾಹಿತಿ ಬಂದ ಕಾರಣ ಎಲ್ಲವನ್ನು ತನಿಖೆ ಮಾಡಿದ್ದೇವೆ. ನಾಲ್ವರ ಕೊಲೆ ಪ್ರಕರಣ ದೊಡ್ಡ ಸವಾಲಾಗಿತ್ತು. ನಾವು ತಂಡವಾಗಿ ಕೆಲಸ ಮಾಡಿ ಆರೋಪಿಯನ್ನು ಬಂಧಿಸಿದ್ದೇವೆ. ಚಾರ್ಜ್ ಶೀಟ್ ಸಲ್ಲಿಕೆಗೆ ಇನ್ನೂ 70-80 ದಿನ ಇದೆ. ಎಲ್ಲಾ ಸಾಕ್ಷಿಗಳ ಸಂಗ್ರಹ ಮಾಡುತ್ತಿದ್ದೇವೆ. ಸುಮಾರು 50 ಪೊಲೀಸರು ಇದರ ಹಿಂದೆ ಕೆಲಸ ಮಾಡಿದ್ದಾರೆ ಎಂದು ಉಡುಪಿ ಎಸ್‌ಪಿ ಡಾ. ಅರುಣ್ ಕೆ. ಹೇಳಿದರು.

Comments are closed.