ಕರಾವಳಿ

ಮಾ.8‌ ರಂದು ಜನ್ನಾಡಿ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ

Pinterest LinkedIn Tumblr

ಕುಂದಾಪುರ: ಇತಿಹಾಸ ಪ್ರಸಿದ್ಧವಾಗಿದ್ದು ಜಿಲ್ಲೆಯಲ್ಲಿಯೇ ಅನಾದಿಕಾಲದಿಂದ ಅತೀ ಹೆಚ್ಚು ನವ ಜೋಡಿಗಳು ವೈವಾಹಿಕ ಜೀವನಕ್ಕೆ ಕಾಲಿಟ್ಟ ಸ್ಥಳವಾಗಿರುವ ಕುಂದಾಪುರ ತಾಲೂಕಿನ ಜನ್ನಾಡಿಯ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಮಾ.8 ರಂದು ಶುಕ್ರವಾರ ಮಹಾಶಿವರಾತ್ರಿ ಉತ್ಸವ ನಡೆಯಲಿದೆ.

ಈ ಪ್ರಯಕ್ತ ಅಂದು ಮುಂಜಾನೆ ಗಂಟೆ 5ರಿಂದ ರಾತ್ರಿ 8.30ರ ತನಕ ವಿಶೇಷ ಪೂಜಾ ಕಾರ್ಯಕ್ರಮ ನಡೆಯಲಿದ್ದು, ರಾತ್ರಿ ಗಂಟೆ 7ರಿಂದ 8.30 ರತನಕ ಶ್ರೀ ಜಟ್ಟಿಗೇಶ್ವರ ಭಜನಾ ಮಂಡಳಿ ರಾಚನಬೆಟ್ಟು ಜನ್ನಾಡಿ ಇವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ತದನಂತರ ಮಹಾಪೂಜೆ ಹಾಗೂ ಪ್ರಸಾದ ವಿತರಣೆ ಹಾಗೂ ರಾತ್ರಿ ಲಘು ಉಪಹಾರ ವ್ಯವಸ್ಥೆ ಇರಲಿದೆ. ಈ ಎಲ್ಲಾ ದೇವತಾ ಕಾರ್ಯಗಳಿಗೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕಾಗಬೇಕೆಂದು ಪ್ರಕಟಣೆಯಲ್ಲಿ ಕೋರಿದ್ದಾರೆ.

Comments are closed.